ಹೈಕೋರ್ಟ್ ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಜಾಬ್ ಸಂಬಂಧ ಹೈಕೋರ್ಟ್ ಆದೇಶ ಉಲ್ಲಂಘಿಸಿದರೆ ಅಂಥವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಹೈಕೋರ್ಟ್ ಆದೇಶ ಪಾಲಿಸುವುದು ಪ್ರತೀ ನಾಗರಿಕನ ಕರ್ತವ್ಯ. ಕೋರ್ಟ್ ಹೇಳಿದಂತೆ ನಡೆದುಕೊಳ್ಳಲೇಬೇಕು. ಕೋರ್ಟ್ ಆದೇಶ ಉಲ್ಲಂಘನೆ ಮಾಡಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಮಕ್ಕಳಿಗೆ ತಿಳಿಯುವ ರೀತಿಯಲ್ಲಿ ಆಡಳಿತ ಮಂಡಳಿ ಮಾತನಾಡಬೇಕು, ಮಕ್ಕಳ ಮನಸ್ಸು ಸೂಕ್ಷ್ಮ. ಅವರಿಗೆ ಸರಿಯಾಗಿ ವಿವರಿಸುವ ಕೆಲಸ ಆಡಳಿತ ಮಂಡಳಿ ಮಾಡಬೇಕು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!