ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಮುಗಲಭೆ ನಿಗ್ರಹಕ್ಕೆ ಕರಾವಳಿಯಲ್ಲಿ ಆ್ಯಂಟಿ ಕಮ್ಯುನಲ್ ಟಾಸ್ಕ್ ಫೋರ್ಸ್ ರಚನೆ ಮಾಡುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಮಂಗಳೂರಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊಲೆಯಲ್ಲಿ ಭಾಗಿಯಾದ 8 ಜನರನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸುಮಾರು ವರ್ಷದಿಂದ ಕೋಮುವಾದ ಹಿನ್ನೆಲೆಯಲ್ಲಿ ರಾಷ್ಟ್ರದ ಗಮನ ಸೆಳೆದಿದೆ. ಈ ಬಾರಿಯೂ ಈ ಘಟನೆ ಆದ್ಮೇಲೆ ದ.ಕ., ಉಡುಪಿಯಲ್ಲಿ ಮತ್ತೆ ಮರುಕಳಿಸಿದೆ ಅನ್ನೋ ಅಭಿಪ್ರಾಯ ಮೂಡಿದೆ. ಸುಹಾಸ್ ಕೊಲೆಯಲ್ಲಿ 8 ಜನ, ಅಶ್ರಫ್ ಕೊಲೆಯಲ್ಲಿ 21 ಜನ ಆರೋಪಿಗಳನ್ನು ಬಂಧಿಸಿದ್ದೇವೆ, ಅವರನ್ನ ಹತ್ತಿಕ್ಕಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ದಕ್ಷಿಣ ಕನ್ನಡ ಜಿಲ್ಲೆ ಶಾಂತಿಯಿಂದ ಇರಬೇಕು ಎಂದು ತಿಳಿಸಿದ್ದಾರೆ.