ಬೆಲೆ ಏರಿಕೆ ವಿರುದ್ಧ ಹೋರಾಟ: ವಾಟಾಳ್ ನಾಗರಾಜ್ ಅರೆಸ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಮನಗರದ KSRTC ಬಸ್ ನಿಲ್ದಾಣದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ರನ್ನು ಪೊಲೀಸರು ಇಂದು ಬಂಧಿಸಿದ್ದಾರೆ.

ಬೆಲೆ ಏರಿಕೆಯನ್ನು ಖಂಡಿಸಿ ನಡೆಸಲಾಗುತ್ತಿದ್ದ ಪ್ರತಿಭಟನೆಯ ವೇಳೆ ವಾಟಾಳ್ ನಾಗರಾಜ್ ಸೌದೆ ಒಲೆಗೆ ಬೆಂಕಿ ಹಚ್ಚಲು ಯತ್ನಿಸುತ್ತಿದ್ದಾಗ ಪೊಲೀಸರು ಅವರನ್ನು ಅರೆಸ್ಟ್ ಮಾಡಿದ್ದಾರೆ ಎಂದು ವರದಿಯಾಗಿದೆ.

ಸ್ಥಳೀಯರು ಈ ಬಂಧನವನ್ನು ಖಂಡಿಸಿದ್ದು, ಪೊಲೀಸರ ಕ್ರಮವು ಪ್ರಜಾಪ್ರಭುತ್ವದ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಎಂದು ಆರೋಪಿಸಿದ್ದಾರೆ. ವಾಟಾಳ್ ನಾಗರಾಜ್ ತಮ್ಮ ಬಂಧನದ ಬಳಿಕವೂ ಹೋರಾಟ ಮುಂದುವರಿಸುವ ತೀರ್ಮಾನವನ್ನು ಪ್ರಕಟಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!