ದಾರಿ​ಗೆ ಅಡ್ಡ ಬಂದ್ದಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಹಲ್ಲೆ: ಬೈಕ್ ಸವಾರನ ವಿರುದ್ಧ FIR ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಕೂಟರ್ ಗೆ ಅಡ್ಡ ಬಂದಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿರುವ ಘಟನೆ ಸುಭಾಷ್‌ ನಗರದಲ್ಲಿ ನಡೆದಿದೆ. ಬೈಕ್ ಸವಾರ ರಮೇಶ್ ಎಂಬಾತನೇ ವಿದ್ಯಾರ್ಥಿನಿ ಮೇಲೆ ದಾಳಿ ನಡೆಸಿರುವ ವ್ಯಕ್ತಿ.

ಮಾಯಾ ಎಂಬ ವಿದ್ಯಾರ್ಥಿನಿ ತನ್ನ ಸೈಕಲ್ ನಲ್ಲಿ ಶಾಲೆಗೆ ಹೋಗುತ್ತಿದ್ದಳು. ಈ ವೇಳೆ ವಿದ್ಯಾರ್ಥಿ ರಮೇಶ್ ಅವರ ಬೈಕ್ ಗೆ ಅಡ್ಡ ಬಂದಿದ್ದಾರೆ. ಕೋಪಗೊಂಡ ಬೈಕ್ ಸವಾರ ವಿದ್ಯಾರ್ಥಿನಿ ಕಪಾಳಕ್ಕೆ ಹೊಡೆದಿದ್ದಾನೆ. ಅಷ್ಟೇ ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಲು ಪ್ರಾರಂಭಿಸಿದಾಗ, ‘ತಪ್ಪಾಯ್ತು ಅಂಕಲ್, ಬಿಟ್ಟು ಬಿಡಿ’ ಎಂದು ಮನವಿ ಮಾಡಿಕೊಂಡಿದ್ದಾಳೆ.

ಬೈಕ್ ಸವಾರನ ದರ್ಪದ ದೃಶ್ಯವನ್ನು ಸಾರ್ವಜನಿಕರೊಬ್ಬರು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ವಿಡಿಯೋ ಆಧರಿಸಿ ರಮೇಶ್ ಮೇಲೆ FIR ಕೂಡ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!