ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಲೇಜು ಕಟ್ಟಡದ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಘಶ್ರೀ (18) ಮೃತ ದುರ್ದೈವಿ. ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಚೆನ್ನಾಪುರ ನಿವಾಸಿಯಾಗಿದ್ದ ಮೇಘಶ್ರೀ ಶಿವಮೊಗ್ಗದ ಕಾಲೇಜಿನ ಹಾಸ್ಟೇಲ್ ನಲ್ಲಿದ್ದುಕೊಂಡು ಓದುತ್ತಿದ್ದಳು.
ಇಂದು ಪರೀಕ್ಷೆ ಬರೆಯಲು ಕಾಲೇಜಿಗೆ ಬಂದಿದ್ದ ಮೇಘಶ್ರೀ, ವಾಶ್ ರೂಂ ಗೆ ಹೋಗುವುದಾಗಿ ಹೇಳಿ ಹೋಗಿದ್ದಾಳೆ. ಬಳಿಕ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.