ಕಲುಷಿತ ಆಹಾರ ಸೇವನೆಯಿಂದ ವಿದ್ಯಾರ್ಥಿ ಸಾವು: ಮಕ್ಕಳ ಆರೋಗ್ಯದ ಕುರಿತು ತುರ್ತು ಕ್ರಮಕ್ಕೆ ಕುಮಾರಸ್ವಾಮಿ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ಟಿ.ಕಾಗೇಪುರ ಗ್ರಾಮದ ಖಾಸಗಿ ವಸತಿ ಶಾಲೆ ಕಲುಷಿತ ಆಹಾರ ಸೇವನೆಯಿಂದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಕುರಿತು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಅಸ್ವಸ್ಥ ಮಕ್ಕಳ ಆರೋಗ್ಯದ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ಮಳವಳ್ಳಿ ತಹಶೀಲ್ದಾರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಸಚಿವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳ ಆರೋಗ್ಯ ಪರಿಸ್ಥಿತಿಯನ್ನು ವಿಚಾರಿಸಿಕೊಂಡರು.

ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಆಹಾರದ ಬಗ್ಗೆ ಜಾಗ್ರತೆಯಿಂದ ಇರಬೇಕು. ಮಕ್ಕಳಿಗೆ ನೀಡಲಾಗುವು ಆಹಾರದ ಬಗ್ಗೆ ಕಟ್ಟೆಚ್ಚರ ವಹಿಸಬೇಕು ಎಂದು ಸ್ಪಷ್ಟ ನೀಡಿರುವ ಸಚಿವರು,ಮೃತಪಟ್ಟಿರುವ ವಿದ್ಯಾರ್ಥಿ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!