ಕಲ್ಲಿನ ಖಣಿ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

ಹೊಸದಿಗಂತ ವರದಿ, ಕಲಬುರಗಿ:

ಕಲ್ಲಿನ ಖಣಿಯಲ್ಲಿ ತುಂಬಿದ್ದ ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಕಲಬುರಗಿ ನಗರದ ಶ್ರೀ ರಾಮತೀರ್ಥ ದೇವಸ್ಥಾನದ ಹಿಂಭಾಗದಲ್ಲಿ ನಡೆದಿದೆ.

ಬೀದರ್ ಮೂಲದ ಆಶೀಶ್ ಗುಪ್ತಾ (15) ಮೃತ ವಿದ್ಯಾರ್ಥಿ. 9ನೇ ತರಗತಿಯಲ್ಲಿ ಓದುತ್ತಿದ್ದ ಆಶೀಶ್ ಗುಪ್ತಾ ಸ್ನೇಹಿತರ ಜೊತೆಗೆ ಕಲಬುರಗಿ ಪ್ರವಾಸಕ್ಕೆ ಬಂದಿದ್ದ. ಶ್ರೀ ರಾಮತೀರ್ಥ ದೇವಸ್ಥಾನದಲ್ಲಿ ದರ್ಶನ ಪಡೆದು, ಸ್ನೇಹಿತರ ಜೊತೆಗೂಡಿ ಕಲ್ಲಿನ ಖಣಿಯಲ್ಲಿ ನಿಂತಿದ್ದ ನೀರಲ್ಲಿ ಈಜಾಡುಲು ಹೋಗಿದ್ದ, ಈ ವೇಳೆ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾನೆ.

ಮೃತ ದೇಹವನ್ನು ಅಗ್ನಿಶಾಮಕ ದಳ ಸಿಬ್ಬಂದಿಗಳು ಹೊರತೆಗೆದಿದ್ದು,ಘಟನೆಯು ಕಲಬುರಗಿ ಸಬ್ ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!