ಹೊಸದಿಗಂತ ವರದಿ,ಮಡಿಕೇರಿ:
ಕಾವೇರಿ ನದಿಗೆ ಜಾರಿ ಬಿದ್ದು ವಿದ್ಯಾರ್ಥಿಯೊಬ್ಬ ಸಾವಿಗೀಡಾಗಿರುವ ಘಟನೆ ಮೂರ್ನಾಡು ಸಮೀಪದ ಕೊಂಡಂಗೇರಿಯಲ್ಲಿ ನಡೆದಿದೆ.
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಆಸಿಮ್ (15) ಮೃತ ವಿದ್ಯಾರ್ಥಿ.
ಸ್ನೇಹಿತನೊಂದಿಗೆ ನದಿ ದಡದಲ್ಲಿ ಬರುತ್ತಿದ್ದ ಸಂದರ್ಭ ಕಾಲು ಜಾರಿ ಆತ ನೀರಿಗೆ ಬಿದ್ದಿರುವುದಾಗಿ ಹೇಳಲಾಗಿದೆ.
ಸ್ಥಳಕ್ಕೆ ಸಿದ್ದಾಪುರ ಪೊಲೀಸರ ಭೇಟಿ ನೀಡಿದ್ದು, ಮೃತದೇಹಕ್ಕಾಗಿ ಶೋಧ ನಡೆಯುತ್ತಿದೆ.