ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರೀತಿ ಮನವಿಯನ್ನು ತಿರಸ್ಕರಿಸಿದ ಅತಿಥಿ ಶಿಕ್ಷಕಿ ಮೇಲೆ ವರ್ಷದ ಹಿಂದೆ 10ನೇ ತರಗತಿ ಪಾಸ್ ಆಗಿದ್ದ ಯುವಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿರುವ ಭೀಕರ ಘಟನೆ ಮಧ್ಯಪ್ರದೇಶದ ನರ್ಸಿಂಗ್ಪುರದಿಂದ ವರದಿಯಾಗಿದೆ.
ಘಟನೆ ಕುರಿತು ಮಾತನಾಡಿರುವ ಪೊಲೀಸರು, ಪ್ರೀತಿ ವಿಚಾರವಾಗಿ ಹದಿನೆಂಟುವರೆ ವರ್ಷದ ಯುವಕ ಈ ಕೃತ್ಯ ಎಸಗಿದ್ದು, ಆತನನ್ನು ಬಂಧಿಸಲಾಗಿದೆ. ಬಂಧಿತ ಯುವಕನನ್ನು ಸೂರ್ಯಾಂಶ್ ಕೊಚರ್ ಎಂದು ಗುರುತಿಸಲಾಗಿದೆ.
26 ವರ್ಷದ ಅತಿಥಿ ಶಿಕ್ಷಕಿ ಶೇ 25ರಷ್ಟು ಸುಟ್ಟ ಗಾಯಕ್ಕೆ ಒಳಗಾಗಿದ್ದು, ಅವರನ್ನು ಜಬಲ್ಪುರ್ ವೈದ್ಯಕೀಯ ಕಾಲೇಜಿಗೆ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಡಿಎಸ್ಪು ಸಂದೀಪ್ ಭೂರಿಯಾ ಮಾತನಾಡಿ, ಆರೋಪಿಯನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ.
ಪ್ರಕರಣದ ತನಿಖೆ ನಡೆಸಿದಾಗ ಈ ಘಟನೆಗೆ ಪ್ರೀತಿ ವಿಚಾರ ಕಾರಣವಾಗಿದೆ ಎಂದು ತಿಳಿದು ಬಂದಿದ್ದು, ಹೇಳಿಕೆ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.