ಹೊಸದಿಗಂತ ಡಿಜಿಟಲ್ ಡೆಸ್ಕ್:
ನಪಂಜಾಬ್ನ ತರಣ್ ತರಣ್ ಜಿಲ್ಲೆಯ ಉಸ್ಮಾನ್ ಕಾನೂನು ಕಾಲೇಜು ಭಯಾನಕ ಘಟನೆಗೆ ಸಾಕ್ಷಿಯಾಗಿದೆ. ತರಗತಿಯಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯನ್ನು ಯುವಕನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತಳನ್ನು 20 ವರ್ಷದ ಸಂದೀಪ್ ಕೌರ್ ಎಂದು ಗುರುತಿಸಲಾಗಿದೆ. ಗುಂಡು ಹಾರಿಸಿದ ಯುವಕ ಪ್ರಿನ್ಸ್ ರಾಜ್ ಎಂಬ ಮೊದಲ ವರ್ಷದ ವಿದ್ಯಾರ್ಥಿ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:
ಘಟನೆ ಸಂಭವಿಸಿದ ತಕ್ಷಣ ಕಾಲೇಜು ಸುತ್ತಮುತ್ತ ಪೊಲೀಸರು ಸೀಲ್ ಮಾಡಿ, ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲು ಆರಂಭಿಸಿದ್ದಾರೆ. ಆರಂಭಿಕ ಮಾಹಿತಿಯ ಪ್ರಕಾರ, ಯುವಕ ತರಗತಿಗೆ ಬಂದ ಕೂಡಲೇ ವಿದ್ಯಾರ್ಥಿನಿಯ ಮೇಲೆ ಗುಂಡು ಹಾರಿಸಿದ್ದಾನೆ. ಬಳಿಕ ಆತ ಕೂಡ ತನ್ನ ಮೇಲೆ ಗುಂಡು ಹಾರಿಸಿಕೊಂಡಿದ್ದಾನೆ.
ಮೃತಳ ಪೋಷಕರು, ಯುವಕ ತಮ್ಮ ಮಗಳಿಗೆ ಹಿಂದೆಂದೇ ಕಿರುಕುಳ ನೀಡುತ್ತಿದ್ದನು ಎಂದು ಆರೋಪಿಸಿದ್ದಾರೆ.



