ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಸ್ ನಿಲ್ಲಿಸುವಂತೆ ಕೈ ಮಾಡಿದರೂ ಸಹ ಚಾಲಕ ಬಸ್ ನಿಲ್ಲಿಸದ ಹಿನ್ನೆಲೆಯಲ್ಲಿ ಕೋಪಗೊಂಡ ವಿದ್ಯಾರ್ಥಿಗಳು, ಕೆಎಸ್ಆರ್ಟಿಸಿ ಬಸ್ ಮೇಲೆ ಕ್ಲಲೆಸೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಯಾನಗರ ಬಳಿ ನಡೆದಿದೆ.
ದೊಡವಾಡ ಗ್ರಾಮದಿಂದ ಬೈಲಹೊಂಗಲಕ್ಕೆ ಬಸ್ ತೆರಳುತ್ತಿತ್ತು. ಈ ವೇಳೆ ನಯಾನಗರ ಗ್ರಾಮದಲ್ಲಿ ಕಾಲೇಜು ವಿದ್ಯಾರ್ಥಿಗಳು ಬಸ್ ನಿಲ್ಲಿಸುವಂತೆ ಕೈ ಮಾಡಿದ್ದಾರೆ. ಆದರೆ ಚಾಲಕ ಬಸ್ ನಿಲ್ಲಿಸದೇ ಮುಂದೆ ಸಾಗಿದ್ದಾರೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ ಹಿಂಭಾಗದ ಗ್ಲಾಸಿಗೆ ಕಲ್ಲು ತೂರಿದ್ದಾರೆ. ಇದರಿಂದ ಬಸ್ ಹಿಂಬದಿಯ ಗಾಜುಗಳಿಗೆ ಹಾನಿಯಾಗಿದೆ.
ನಂತರ ಕಾಲೇಜು ವಿದ್ಯಾರ್ಥಿಗಳು, ಚಾಲಕ ಮತ್ತು ನಿರ್ವಾಹಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಗೊಂದಲದ ಸ್ಥಿತಿ ನಿರ್ಮಾಣವಾಗಿತ್ತು. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.