ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಲಾ ಕಾಲೇಜುಗಳಿಗೆ ತೆರಳಲು ಬಸ್ಗಳ ಕೊರತೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ.
ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಬಳಿ ಈ ಘಟನೆ ನಡೆದಿದೆ. ಶಾಲಾ ಕಾಲೇಜು ಸಮಯದಲ್ಲಿ ಹೆಚ್ಚು ಸರ್ಕಾರಿ ಬಸ್ ಗಳು ಬರುತ್ತಿಲ್ಲ. ಹೆಚ್ಚುವರಿ ಬಸ್ಗಳ ವ್ಯವಸ್ಥೆ ಕಲ್ಪಿಸುವಂತೆ ಕೆಎಸ್ಆರ್ಟಿಸಿ ಬಸ್ ತಡೆದು ಪ್ರತಿಭಟನೆ ಮಾಡಿದ್ದಾರೆ.
ವಿದ್ಯಾರ್ಥಿಗಳು ಶಾಲಾ ಕಾಲೇಜು ಸಮಯದಲ್ಲಿ ಹೆಚ್ಚು ಸರ್ಕಾರಿ ಬಸ್ ಗಳು ಬರುತ್ತಿಲ್ಲ ಎಂದು ಆರೋಪಿಸಿದ್ದಾರೆ. ಈ ಸಂದರ್ಭ ಮಕ್ಕಳು, “ನಿಗದಿತ ಸಮಯಕ್ಕೆ ಬಸ್ಗಳು ಬಾರದೇ ಇರುವ ಕಾರಣ ಪ್ರತಿನಿತ್ಯ ಶಾಲಾ ಕಾಲೇಜುಗಳಿಗೆ ತೆರಳಲು ತೊಂದರೆಯಾಗುತ್ತಿದೆ. ಹೀಗಾಗಿ ಹೆಚ್ಚುವರಿ ಬಸ್ಗಳನ್ನು ವ್ಯವಸ್ಥೆ ಮಾಡಿ” ಎಂದು ಒತ್ತಾಯಿಸಿದ್ದಾರೆ.