ಹೈಕೋರ್ಟ್‌ನಲ್ಲಿ ನಕಲಿ ದಾಖಲೆ ಸಲ್ಲಿಕೆ: ಟಿಡಿಪಿ ಮಾಜಿ ಸಚಿವ, ಪುತ್ರನ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಆಂಧ್ರಪ್ರದೇಶ ಹೈಕೋರ್ಟ್‌ಗೆ ನಕಲಿ ದಾಖಲೆ ಸಲ್ಲಿಸಿದ ಆರೋಪದ ಮೇಲೆ ರಾಜ್ಯದ ಮಾಜಿ ಸಚಿವ ಮತ್ತು ತೆಲುಗು ದೇಶಂ ಪಕ್ಷದ ನಾಯಕ ಅಯ್ಯಣ್ಣ ಪತ್ರುಡು ಮತ್ತು ಅವರ ಪುತ್ರ ರಾಜೇಶ್ ಅವರನ್ನು ಅಪರಾಧ ತನಿಖಾ ವಿಭಾಗ (ಸಿಐಡಿ) ಪೊಲೀಸರು ಬಂಧಿಸಿದ್ದಾರೆ.

ನೀರಾವರಿ ಕಾಲುವೆ ಒತ್ತುವರಿ ಮಾಡಿಕೊಂಡು ತಮ್ಮ ಮನೆಯಲ್ಲಿ ಗೋಡೆ ನಿರ್ಮಾಣ ಮಾಡಲಾಗಿದೆ ಎಂಬುದರ ಕುರಿತು ಹೈಕೋರ್ಟ್‌ಗೆ ನಕಲಿ ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂಬ ಆರೋಪದಡಿ ಬುಧವಾರ ರಾತ್ರಿ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದಾರೆ.

ಸಿಐಡಿ ಪೊಲೀಸರು ಅವರಿಗೆ ಅಪರಾಧ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 50 ಎ ಅಡಿಯಲ್ಲಿ ನೋಟಿಸ್ ಜಾರಿ ಮಾಡಿದ್ದಾರೆ.

ಈ ಸಂಬಂಧ ಮಂಗಳಗಿರಿ ಸಿಐಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇವರ ವಿರುದ್ಧ ಮಂಗಳಗಿರಿ ಸಿಐಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿಸಲಾಗಿದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ. ಅವರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ವರದಿ ಮಾಡಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!