ಹೊಸದಿಗಂತ ವರದಿ ಬೀದರ :
ಬೀದರ ವಿಧಾನಸಭಾ ದಕ್ಷಿಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹಾಗೂ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದರು.
ಈ ವೇಳೆ ಮಾತನಾಡಿದ ಅವರು, ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಜಿಡಿಎಸ್ ಪಕ್ಷ ಅಧಿಕಾರಕ್ಕೆ ಬರುವ ಖಚಿತ ಎಂದು ಹೇಳಿದರು.
ಅವರು ತಮ್ಮ ಕ್ಷೇತ್ರ ದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ನೋಡಿ ಮತರಾರರು ಹೆಚ್ಚು ಖುಷಿಯಾಗಿದ್ದಾರೆ. ರೈತರಿಗಾಗಿ ಸಾಲಮನ್ನಾ ಯೋಜನೆ, ಹೀಗೆ ಅನೇಕ ಯೋಜನೆಗಳನ್ನು ಜಿಲ್ಲೆಯಲ್ಲಿ ರೈತರ ಬಾಗಿಲಿಗೆ ಮುಟ್ಟಿಸಿದ್ದೇವೆ. ಅದಕಾರಣ ವಿಧಾನ ಸಭೆ ಚುನಾವಣೆಯಲ್ಲಿ ಗೆಲವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.