ದಿಗಂತ ವರದಿ ಬಾಗಲಕೋಟೆ :
ಬಾಗಲಕೋಟೆ ಲೋಕಸಭೆ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ನಗರದ ಬಿವ್ಹಿವ್ಹಿ ಸಂಘದ ಕಣವಿ ವೀರಭದ್ರೇಶ್ವರ ದೇವಸ್ಥಾನದಿಂದ ಕಾರ್ಯಕರ್ತರಿಂದ ಭವ್ಯ ಮೆರವಣಿಗೆ ಜರುಗಿತು.
ಸಹಸ್ರಾರು ಸಂಖ್ಯೆಯಲ್ಲಿ ಕ್ಷೇತ್ರದಿಂದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಆಗಮಿಸಿದ್ದರು.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಶಾಸಕ ಬಾಲಚಂದ್ರ ಜಾರಕಿಹೊಳಿ, ರಾಜ್ಯ ಸಭೆ ಸದಸ್ಯ ನಾರಾಯಣಸಾ ಭಾಂಡಗೆ, ಶಾಸಕ ಜಗದೀಶ ಗುಡಗುಂಟಿ, ಸಿದ್ದು ಸವದಿ, ಮಾಜಿ ಶಾಸಕ ವೀರಣ್ಣ ಚರಂತಿಮಠ,ದೊಡ್ಡನಗೌಡ ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಹಣಮಂತ ಮಾವಿನಮರದ ಸೇರಿದಂತೆ ಅನೇಕ ನಾಯಕರು ಭಾಗವಹಿಸಿದ್ದರು.