ಹೊಸದಿಗಂತ ಡಿಜಿಟಲ್ ಡೆಸ್ಕ್
ಕುಕ್ಕೆ ಸುಬ್ರಹ್ಮಣ್ಯದಲ್ಲಿ ವರುಣನರ್ಭಟಕ್ಕೆ ಕುಮಾರಧಾರ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಜರಿದು ಪರಿಣಾಮ ಮಣ್ಣಿನಡಿ ಎರಡು ಮಕ್ಕಳು ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ.
ಧಾರಾಕಾರ ಮಳೆಗೆ ಏಕಾಏಕಿ ಹೊಸೊಳಿಕೆ ಕುಸುಮಾಧರ ಅಂಗಡಿ ಅವರ ಮನೆಯ ಬರೆ ಕುಸಿದು ಬಿದ್ದಿದೆ.
ಸುಬ್ರಹ್ಮಣ್ಯದ ಕುಮಾರಧಾರ ನದಿ ಜಲಾವೃತವಾಗಿದ್ದು , ಸ್ಥಳೀಯರಲ್ಲಿ ಭಾರಿ ಆತಂಕಕ್ಕೆ ಕಾರಣವಾಗಿದೆ. ಸದ್ಯ ಮಣ್ಣಿನಡಿಗೆ ಸಿಲುಕಿಕೊಂಡಿರುವ ಎರಡು ಮಕ್ಕಳನ್ನು ಹೊರಕ್ಕೆ ತೆಗೆಯಲು ಸ್ಥಳೀಯರು ಭಾರಿ ಪ್ರಯತ್ನ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಮಣ್ಣಿನಡಿ ಸಿಲುಕಿದವರನ್ನು ಹೊರತೆಗೆಯುವ ಪ್ರಯತ್ನ ಮುಂದುವರೆದಿದೆ.