ತುಮಕೂರು ಸಿದ್ದಗಂಗಾ ಮಠದ ನೂತನ ಉತ್ತರಾಧಿಕಾರಿಗೆ ಇಂದು ಪಟ್ಟಾಭಿಷೇಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪ್ರಸಿದ್ಧ ತುಮಕೂರಿನ ಸಿದ್ಧಗಂಗಾ ಮಠದ ನೂತನ ಉತ್ತರಾಧಿಕಾರಿ ಮನೋಜ್ ಕುಮಾರ್ ಅವರಿಗೆ ಪಟ್ಟಾಭಿಷೇಕ ಕಾರ್ಯಕ್ರಮ ಇಂದು ಸರಳವಾಗಿ ನಡೆಯುತ್ತಿದೆ. ಪಟ್ಟಾಭಿಷೇಕವನ್ನು ಸಿದ್ದಗಂಗಾ ಹಳೆಯ ಮಠದ ಆವರಣದಲ್ಲಿ ನಡೆಸಲಾಗುತ್ತಿದ್ದು, ಕೆಲವರಿಗೆ ಮಾತ್ರ ಆಹ್ವಾನಿಸಲಾಗಿದೆ. ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ.

ಜಗಜ್ಯೋತಿ ಬಸವೇಶ್ವರರ ಜಯಂತಿ ದಿನದಂದು ಶ್ರೀಮಠಕ್ಕೆ ನೇಮಿಸಲಾಗಿರುವ ಉತ್ತರಾಧಿಕಾರಿ ಮನೋಜ ಕುಮಾರ್​ ಅವರ ಪಟ್ಟಾಭಿಷೇಕ ಸಮಾರಂಭ ನಡೆಯುತ್ತಿದೆ.

ಇಂದು ಬೆಳಗ್ಗೆ 5 ಗಂಟೆಯಿಂದ ಶ್ರೀಮಠದಲ್ಲಿ ಪೂಜಾ ಕೈಂಕರ್ಯಗಳು ಆರಂಭವಾಗಿದ್ದು, 6:30ಕ್ಕೆ ದೀಕ್ಷಾ ಸಂಸ್ಕಾರ ಮುಗಿಯುತ್ತದೆ. ನಂತರ ಬೆಳಿಗ್ಗೆ 7:30ಕ್ಕೆ ಪಟ್ಟಾಭಿಷೇಕ ಸರಳವಾಗಿ ಆರಂಭವಾಗುತ್ತದೆ. ಈ ಕಾರ್ಯಕ್ರಮದಲ್ಲಿ ಸತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ದೇಗುಲ ಮಠದ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ಹಾಗೂ ಬೇಲಿ ಮಠದ ಶಿವಾನುಭವ ಚರಮೂರ್ತಿ ಶಿವಮೂರ್ತಿ ಮಹಾಸ್ವಾಮಿಗಳು ಸೇರಿ ಅನೇಕ ಮಠಾಧೀಶರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯುತ್ತದೆ.

ಸಾರ್ವಜನಿಕರು ಹಾಗೂ ಹಿತೈಷಿಗಳು ಮಾತ್ರ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸರಳವಾಗಿ ಈ ಸಮಾರಂಭ ಆಯೋಜನೆ ಮಾಡಲಾಗುತ್ತಿದ್ದು, ಮಠದ ಭಕ್ತಾದಿಗಳು ಸಹಕಾರ ನೀಡಬೇಕು ಎಂದು ದೇವಸ್ಥಾನದ ಆಡಳಿತ ಮಂಡಳಿಯಿಂದ ಮನವಿ ಮಾಡಿದೆ.

ಸಿದ್ದಗಂಗಾ ಮಠಕ್ಕೆ ಸಿದ್ದಗಂಗಾ ಪಾಲಿಟೆಕ್ನಿಕ್ ಉಪನ್ಯಾಸಕ ಮನೋಜ್ ಕುಮಾರ್ ಅವರನ್ನು ಉತ್ತರಾಧಿಕಾರಿಯನ್ನಾಗಿ ಮಠದ ಸರ್ವಾಧ್ಯಕ್ಷ ಸಿದ್ದಲಿಂಗಸ್ವಾಮಿ ಅವರು ನೇಮಿಸಿದ್ದಾರೆ. ಸಿದ್ದಗಂಗಾ ಪಾಲಿಟೆಕ್ನಿಕ್ ನಲ್ಲಿ ಉಪನ್ಯಾಸಕರಾಗಿರುವ ಮನೋಜ್ ಕುಮಾರ್ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೈಲನಹಳ್ಳಿಯವರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!