ಛೆ.. ಇದೆಂಥಾ ಕ್ರೂರತನ! ಪಹಲ್ಗಾಮ್‌ ಉಗ್ರ ದಾಳಿ ಖಂಡಿಸಿದ ನಟ ಅಕ್ಷಯ್ ಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ದಾಳಿ ನಡೆಸಿದ್ದು, ಕರ್ನಾಟಕದ ಶಿವಮೊಗ್ಗ ನಿವಾಸಿ ಮಂಜುನಾಥ್ ಸೇರಿ 27ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಅನ್ನೋ ಆಘಾತಕಾರಿ ವಿಚಾರ ಈಗ ಹೊರಬಂದಿದೆ.

ಈ ಭಯಾನಕ ದಾಳಿಯ ವಿರುದ್ಧ ಬಾಲಿವುಡ್ ನಟ ಅಕ್ಷಯ್ ಕುಮಾರ್ ಟ್ವೀಟ್‌‌ ಮಾಡಿ, ಖಂಡಿಸಿದ್ದಾರೆ.

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ತಿಳಿದು ಆಘಾತವಾಗಿದೆ. ಈ ರೀತಿಯ ಮುಗ್ಧ ಜನರನ್ನು ಕೊಲ್ಲುವುದು ದುಷ್ಟತನ. ಅವರ ಕುಟುಂಬಗಳಿಗಾಗಿ ಪ್ರ್ರಾರ್ಥಿಸುತ್ತೇನೆ ಎಂದು ಅಕ್ಷಯ್ ಕುಮಾರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!