ಹೊಸದಿಗಂತ ಡಿಜಿಟಲ್ ಡೆಸ್ಕ್
ಇಂದೋರ್ ರಾಜೇಂದ್ರ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡಿಸಲಿಗೆ ಹಠಾತ್ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ರಭಸಕ್ಕೆ ಗುಡಿಸಿಲಿನಲ್ಲಿ ಮಲಗಿದ್ದ ಇಬ್ಬರು ಬಾಲಕಿಯರು ಸಜೀವ ದಹನವಾಗಿ ಮೃತಪಟ್ಟಿದ್ದಾರೆ.
ಮುಸ್ಕಾನ್ ಶ್ರೀ (6) ನಂದು (4) ಎಂಬ ಬಾಲಕಿಯರು ಘಟನೆಯಲ್ಲಿ ಮೃತಪಟ್ಟಿದ್ದಾರೆ.
ಇಂದೋರ್ನ ರಾಜೇಂದ್ರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚೋಯಿತ್ರಮ್ ಮಂಡಿ ಬಳಿಯ ಪ್ರಕಾಶ್ ನಗರದ ಗುಡಿಸಲಿನಲ್ಲಿ ಅವರ ಕುಟುಂಬ ವಾಸಿಸುತ್ತಿದ್ದರು.
ಇನ್ನು ವಿಷಯ ತಿಳಿದ ಕೂಡಲೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದು, ಘಟನೆಗೆ ಕಾರಣಳಾದ ಮಕ್ಕಳ ಚಿಕ್ಕಮ್ಮ ಕಾಮಿನಿ ಎಂಬಾಕೆಯನ್ನು ವಶಕ್ಕೆ ಪಡೆದಿದ್ದಾರೆ.
ತಡರಾತ್ರಿ ಇದ್ದಕ್ಕಿದ್ದಂತೆ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡಿದ್ದು ಆ ವೇಳೆ ಮಲಗಿದ್ದ ಇಬ್ಬರು ಪುಟ್ಟ ಮಕ್ಕಳಿಗೆ ಬೆಂಕಿ ತಗುಲಿದೆ. ನಂತರ ಸುಟ್ಟಗಾಯಗಳಿಂದ ನರಳುತ್ತಿದ್ದ ಮಕ್ಕಳಿಗೆ ಚಿಕಿತ್ಸೆ ನೀಡಿದರೂ ದುರಾದೃಷ್ಟವಶಾತ್ ಅವರು ಮೃತರಾಗಿದ್ದಾರೆ.
ಗುಡಿಸಲಿನಲ್ಲಿ ಕಟ್ಟಿಹಾಕಿದ್ದ ಕೆಲವು ಪ್ರಾಣಿಗಳು ಬೆಂಕಿಗೆ ಆಹುತಿಯಾಗಿರುವ ಸಾಧ್ಯತೆ ಇದೆ. ಘಟನೆಯ ವಿಷಯ ತಿಳಿದ ತಕ್ಷಣ ಹಿರಿಯ ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿ ಸಂಪೂರ್ಣ ತನಿಖೆ ಆರಂಭಿಸಿದ್ದಾರೆ.
ಚಿಕ್ಕಮ್ಮ ಕಾಮಿನಿಯ ಪ್ರೇಮ ಪ್ರಕರಣ ಕುಟುಂಬಕ್ಕೆ ತಿಳಿದು ಬಂದಿದ್ದರಿಂದ ಆಕೆಯೇ ಗುಡಿಸಲಿಗೆ ಬೆಂಕಿ ಹಚ್ಚಿರಬಹುದು ಎಂಬ ಸಂಶಯ ವ್ಯಕ್ತವಾಗಿದೆ.