ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಸಿಲ ಬೇಗೆಗೆ ಬಸವಳಿದು ಹೋಗಿದ್ದ ಕೊಡಗಿಗೆ ಮಂಗಳವಾರ ಮಳೆಯ ಸಿಂಚನವಾಗಿದೆ.
ಮಂಗಳವಾರ ಸಂಜೆಯ ವೇಳೆಗೆ ಜಿಲ್ಲೆಯ ಹಲವೆಡೆಗಳಲ್ಲಿ ಮಳೆಯಾಗಿದೆ.
ಮುಂದಿನ ಒಂದೆರಡು ದಿನಗಳಲ್ಲಿ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಇದೀಗ ರಾಜ್ಯದಲ್ಲಿ ಮೊದಲ ಬಾರಿಗೆ ಎಂಬಂತೆ ಕೊಡಗು ಜಿಲ್ಲೆಯಲ್ಲಿ ಮಳೆಯಾಗಿದ್ದು, ಬಿಸಿಲಿಗೆ ಬಸವಳಿದಿದ್ದ ಜನತೆಗೆ ತಂಪೆರೆದಿದೆ.