ಹಿಂಸೆಗೆ ತಿರುಗಿದ ಕಬ್ಬು ಬೆಳೆಗಾರರ ಪ್ರತಿಭಟನೆ: ಲಾರಿಗಳ ಮೇಲೆ ದಾಳಿ

ಹೊಸದಿಗಂತ ವರದಿ,ಹಳಿಯಾಳ:

ಹಳಿಯಾಳದಲ್ಲಿ ಕಬ್ಬು ಬೆಳೆಗಾರರಿಂದ ನಡೆಯುತ್ತಿರುವ ಬೃಹತ್ ಪ್ರತಿಭಟನೆ ಬುಧವಾರ ರಾತ್ರಿ ಹಿಂಸಾತ್ಮಕ ರೂಪಕ್ಕೆ ತಿರುಗಿದ್ದು ಪ್ರತಿಭಟನೆ ಸಂದರ್ಭದಲ್ಲಿಯೇ ಕಬ್ಬು ತುಂಬಿಕೊಂಡು ಕಾರ್ಖಾನೆಗೆ ಸಾಗಲು ಬಂದ ಕಬ್ಬು ತುಂಬಿದ ಲಾರಿ ತಡೆದು ಲಾರಿ ಗಾಜು ಒಡೆದು ರೈತರಿಂದ ಆಕ್ರೋಶ ವ್ಯಕ್ತವಾಗಿದೆ.
ಹಳಿಯಾಳದ ಹುಲ್ಲಟ್ಟಿ ಪ್ರದೇಶದಲ್ಲಿರವ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಗೆ ತೆರಳುತ್ತಿದ್ದ ಕಬ್ಬು ತುಂಬಿದ ವಾಹನಗಳನ್ನು ತಡೆದು ಬುಧವಾರ ರಾತ್ರಿ ಕಬ್ಬು ಬೆಳಗಾರ ರೈತರು ಭಾರಿ ಪ್ರತಿಭಟನೆ ನಡೆಸಿದ್ದಾರೆ.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದ 37 ದಿನಗಳಿಂದ‌ ಅಹೋರಾತ್ರಿ ಹೋರಾಟ ಮತ್ತು 6 ದಿನಗಳಿಂದ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ಕಬ್ಬು ಬೆಳೆಗಾರರು ನಡೆಸುತ್ತಿದ್ದಾರೆ ಮಾತ್ರವಲ್ಲದೇ ನ್ಯಾಯ ದೊರಕುವವರೆಗೂ ಕಾರ್ಖಾನೆ ‌ಪ್ರಾರಂಭಿಸಬಾರದು ಎಂದು ಹಠ ಹಿಡಿದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!