ದಿಗಂತ ವರದಿ ವಿಜಯಪುರ:
ಬೈಕ್ಗೆ ಕಬ್ಬಿನ ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ತಾಂಡಾ ಕ್ರಾಸ್ ಬಳಿ ಗುರುವಾರ ತಡರಾತ್ರಿ ನಡೆದಿದೆ. ಇಲ್ಲಿನ ರಾವುತಪ್ಪ ವಿಠ್ಠಲ್ ಜೀವಣಗಿ (38) ಮೃತಪಟ್ಟಿರುವ ದುರ್ದೈವಿ.
ರಾವುತಪ್ಪ ಜಿಗಜೀವಣಗಿ ಈತ ಬೈಕ್ ನಲ್ಲಿ ತೆರಳುತ್ತಿದ್ದಾಗ, ಹಿಂಬದಿಯಿಂದ ಕಬ್ಬು ತುಂಬಿಕೊಂಡು ಹೋಗುತ್ತಿರುವ ಟ್ರ್ಯಾಕ್ಟರ್ ಡಿಕ್ಕಿಯಾಗಿದೆ. ಇದರಿಂದ ರಾವುತಪ್ಪಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.