ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಸೆರೆ

 ಹೊಸದಿಗಂತ ವರದಿ, ಮಂಗಳೂರು :

ಮಂಗಳೂರಿನ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಿಂದು ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕಳವಾರು ಆಸ್ರಯ ಕಾಲೊನಿ ನಿವಾಸಿ ಅಜರುದ್ದೀನ್ ಯಾನೆ ಅಜರ್ ಯಾನೆ ಅಜ್ಜು(29), ಕಾಪು ಸಮೀಪದ ಬದ್ರಿಯ ನಗರ ಬೆಳಪು ನಿವಾಸಿ ಅಬ್ದುಲ್ ಖಾದರ್ ಯಾನೆ ನೌಫಲ್(24), ಫರಂಗಿಪೇಟೆ ಕುಂಪನಮಜಲು ನಿವಾಸಿ ನೌಷದ್ ಯಾನೆ ವಾಮಂಜೂರು ನೌಷದ್ ಯಾನೆ ಚೊಟ್ಟೆ ನೌಷದ್(39) ಬಂಧಿತರು.

ಬಂಧಿತರ ಪೈಕಿ ಅಜರುದ್ದೀನ್ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ರಾಣೆಗಳಲ್ಲಿ 3 ಕಳವು ಪ್ರಕರಣ ದಾಖಲಾಗಿರುತ್ತದೆ. ಈತನು ಪ್ರಕರಣದ ಆರೋಪಿಗಳಿಗೆ ಕೊಲೆಯಾದ ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿಯನ್ನು ನೀಡಿ ಕೊಲೆಗೆ ಸಹಕರಿಸಿದವನಾಗಿದ್ದಾನೆ.

ಆರೋಪಿ ಅಬ್ದುಲ್ ಖಾದರ್ ,ಆರೋಪಿಗಳು ಕೊಲೆ ಕೃತ್ಯ ನಡೆಸಿದ ನಂತರ ಕಾರಿನಲ್ಲಿ ಪರಾರಿಯಾಗುವ ಸಮಯದಲ್ಲಿ ಆರೋಪಿಗಳಿಗೆ ಸಹಕರಿಸಿದ್ದ.‌ ಇನ್ನೋರ್ವ ಆರೋಪಿ ನೌಷದ್ ಎಂಬಾತನು ಸುಹಾಸ್ ಶೆಟ್ಟಿಯ ಕೊಲೆಗೆ ಉಳಿದ ಆರೋಪಿಗಳ ಜೊತೆ ಸಂಚು ರೂಪಿಸಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದನು . ಈತನು ಈ ಹಿಂದೆ ಸುರತ್ಕಲ್, ಬಜ್ಪೆ, ಮೂಡಬಿದ್ರಿ, ಮಂಗಳೂರು ಉತ್ತರ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿರುತ್ತದೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳ ಪೈಕಿ ಅಜರುದ್ದೀನ್ ಎಂಬಾತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇನ್ನಿಬ್ಬರನ್ನು ಪೊಲೀಸ್ ಕಸ್ಡಡಿಗೆ ಒಪ್ಪಿಸಲಾಗಿದೆ. ಈ ಕೊಲೆ ಪ್ರಕರಣದ ತನಿಖೆಯು ಮುಂದುವರಿದಿದ್ದು, ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!