ಪ್ರಧಾನಿ ಮೋದಿ ಕೇರಳ ಪ್ರವಾಸದ ವೇಳೆ ಆತ್ಮಾಹುತಿ ಬಾಂಬ್ ದಾಳಿ ಬೆದರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ಮೋದಿ ಕೇರಳ ಭೇಟಿ ಸಂದರ್ಭದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆಯುವ ಸಾಧ್ಯತೆ ಇದೆ ಎನ್ನುವ ಬೆದರಿಕೆ ಪತ್ರ ದೊರೆತಿದೆ.
ಬೆದರಿಕೆ ಹಿನ್ನೆಲೆ ಕೇರಳದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಪ್ರಧಾನಿ ಮೊದಿ ಏ.24ರಂದು ಕೇರಳದ ಕೊಚ್ಚಿಗೆ ಭೇಟಿ ನೀಡಬೇಕಿದೆ. ಇದೇ ಸಂದರ್ಭದಲ್ಲಿ ಬಾಂಬ್ ದಾಳಿ ನಡೆಯಲಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ.
ಬಿಜೆಪಿಯ ರಾಜ್ಯ ಕಚೇರಿಗೆ ಪತ್ರ ಬಂದಿದ್ದು, ನಿರ್ದಿಷ್ಟ ವ್ಯಕ್ತಿಯ ಹೆಸರು ಹಾಗೂ ವಿಳಾಸವನ್ನೂ ಬರೆಯಲಾಗಿದೆ. ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದ್ದು, ಬೇರೆ ಯಾರೋ ಅವರ ಹೆಸರಿನಲ್ಲಿ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!