ಸೂಟ್‌ಕೇಸ್, ಹಣವಿರುವ ಗುಟ್ಕಾ ಬ್ಯಾಗ್, ನಕಲಿ ನೋಟ್.. ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೈ ಪ್ರತಿಭಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಸಿಕ್ಕಿದ್ದು, ಇದೀಗ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.

ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಬಳಿ ಪ್ರತಿಭಟನೆ ನಡೆಯುತ್ತಿದ್ದು, ಪೋಸ್ಟರ್, ಸೂಟ್‌ಕೇಸ್, ಹಣವಿರೋ ಗುಟ್ಕಾ ಬ್ಯಾಗ್, ನಕಲಿ ನೋಟ್ ಪ್ರದರ್ಶಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಇಂದು ಕಾಂಗ್ರೆಸ್ ಕಾರ್ಯಕರ್ತರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದಾರೆ. ರೋಲ್ ಕಾಲ್ ಮಾಡೆಲ್ ವಿರೂಪಾಕ್ಷಪ್ಪ ಎನ್ನುವ ಪೋಸ್ಟರ್ ಹಿಡಿಯಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!