ಮಂಡ್ಯದ ನೂತನ ಸಂಸದರಾಗಿ ಆಯ್ಕೆಯಾದ‌ ಹೆಚ್‌.ಡಿ.ಕುಮಾರಸ್ವಾಮಿಗೆ ಸುಮಲತಾ ಅಭಿನಂದನೆ..!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಡ್ಯದ ನೂತನ ಸಂಸದರಾಗಿ ಆಯ್ಕೆಯಾಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ನಿರ್ಗಮಿತ ಸಂಸದರಾದ ಸುಮಲತಾ ಅಂಬರೀಶ್‌ ಅಭಿನಂದನೆ ಸಲ್ಲಿಸಿದರು. ಕಾಂಗ್ರೆಸ್ ನ ಭರವಸೆಗಳ ಮೇಲೂ ವಾಗ್ದಾಳಿ ನಡೆಸಿದರು.

ಅವರು ತಮ್ಮ ಫೇಸ್‌ಬುಕ್ ಪುಟದಲ್ಲಿ ಹೀಗೆ ಬರೆದಿದ್ದಾರೆ: “ಮಂಡ್ಯದ ಜನರ ಧ್ವನಿಯನ್ನು ಖರೀದಿಸಲು ಸಾಧ್ಯವಿಲ್ಲ ಎಂದು ನಮ್ಮ ಜನರು ಸಾಬೀತುಪಡಿಸಿದ್ದಾರೆ.” ಹಲವು ಆಮಿಷಗಳನ್ನು ನೀಡಿ, ಸಂತಸದ ಭರವಸೆ ನೀಡಿ ಜನರನ್ನು ವಂಚಿಸಲು ಸಾಧ್ಯವಿಲ್ಲ ಎಂಬುದನ್ನು ಸಾಬೀತುಪಡಿಸಿದ ಮಂಡ್ಯ ಜನತೆಗೆ ಅಭಿನಂದನೆಗಳು. ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೆಲಸ ಮಾಡುತ್ತಿರುವ ಮಂಡ್ಯದಿಂದ ನೂತನ ಸಂಸದರಾಗಿ ಆಯ್ಕೆಯಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಎಂದು ಪೋಸ್ಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!