ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಬಿಜೆಪಿ ಸೇರಿಕೊಂಡಿಲ್ಲ, ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ ಅಷ್ಟೆ ಹೀಗಾಗಿ ಅವರಿಗೆ ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಸುಮಲತಾ ಅಂಬರೀಷ್ ಮಂಡ್ಯದಿಂದ ತಮಗೆ ಬಿಜೆಪಿ ಟಿಕೆಟ್ ಪಕ್ಕಾ ಎಂದು ಹೇಳಿಕೊಂಡಿದ್ದರು. ಆದರೆ ಇದೀಗ ಟಿಕೆಟ್ ಕೈ ತಪ್ಪುವ ಸುಳಿವನ್ನು ಬಿಜೆಪಿ ನೀಡಿದೆ.
ಸುಮಲತಾ ಅವರಿಗೆ ಪಕ್ಷಕ್ಕೆ ಸೇರುವ ಇಚ್ಛೆ ಇದ್ದಿದ್ದರೆ ಆರು ತಿಂಗಳ ಹಿಂದೆಯೇ ಸೇರಬೇಕಿತ್ತು. ಇದೆಲ್ಲವನ್ನೂ ಆಲೋಚಿಸಿ ವರಿಷ್ಠರು ತೀರ್ಮಾನ ಮಾಡುತ್ತಾರೆ. ಜೆಡಿಎಸ್ ಹಾಗೂ ಬಿಜೆಪಿ ಎರಡೂ ಮಂಡ್ಯದಲ್ಲಿ ಸಾಕಷ್ಟು ಪ್ರಾಬಲ್ಯ ಹೊಂದಿದೆ. ಹೀಗಾಗಿ ಮಂಡ್ಯದಲ್ಲಿ ಗೆಲುವು ನಮ್ಮದೇ ಎಂದು ಹೇಳಿದ್ದಾರೆ.