ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಎಸ್ ಯಡಿಯೂರಪ್ಪ ಅವರು ಇಂದು ಬೆಳಗಾವಿಯಲ್ಲಿದ್ದು, ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಕ್ಷೇತ್ರಗಳಿಗೆ ಪ್ರವಾಸ ಕೈಗೊಂಡಿದ್ದಾರೆ.
ಇದೆ ವೇಳೆ ಮಾಧ್ಯಮದವರು ಸುಮಲತಾ ಅಂಬರೀಷ್ ಅವರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಬಿಎಸ್ ಯಡಿಯೂರಪ್ಪ ಅವರು, ಮಂಡ್ಯ ಕ್ಷೇತ್ರದಿಂದ ಎಚ್.ಡಿ.ಕುಮಾರಸ್ವಾಮಿ ಕಣಕ್ಕಿಳಿಯುವುದು ಹೆಚ್ಚು ಕಡಿಮೆ ಖಚಿತವಾಗಿರುವ ಹಿನ್ನೆಲೆಯಲ್ಲಿ ದಿಲ್ಲಿಯ ಗಣ್ಯರು ಸುಮಲತಾ ಅವರೊಂದಿಗೆ ಮಾತನಾಡಿ ಸೂಕ್ತ ಸ್ಥಾನಮಾನ ನೀಡುವಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಸುಮಲತಾ ಅವರೊಂದಿಗೆ ಮಾತನಾಡಿದ್ದೀರಾ ಎಂಬ ಪ್ರಶ್ನೆಗೆ “ಇಲ್ಲ, ರಾಷ್ಟ್ರೀಯ ನಾಯಕರು ಅವರೊಂದಿಗೆ ಮಾತನಾಡುತ್ತಾರೆ” ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಇನ್ನೂ ರಾಜ್ಯಗಳಿಗೆ ಬರ ಪರಿಹಾರ ಹಣವನ್ನು ನೀಡಿಲ್ಲ ಎಂಬ ಕಾಂಗ್ರೆಸ್ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈಗಾಗಲೇ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ ಎಂದರು.