ಹೊಸದಿಗಂತ ಡಿಜಿಟಲ್ ಡೆಸ್ಕ್:
ಸುಮಲತಾ ಅವರು ಬಿಜೆಪಿಗೆ ತಮ್ಮ ಬೆಂಬಲ ಘೋಷಿಸುವ ಮೂಲಕ ಎಲ್ಲ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಸುಮಲತಾ ಅಂಬರೀಶ್ ಅವರು ಈಗಾಗಲೇ ಎರಡು ಬಾರಿ ಬಿಜೆಪಿ ಹೈಕಮಾಂಡ್ಗೆ ಭೇಟಿ ನೀಡಿದ್ದರು ಆದರೆ ನಿರ್ಧಾರವನ್ನು ಪ್ರಕಟಿಸಿರಲಿಲ್ಲ. ಬೆಂಬಲಿಗರ ಸಭೆಯಲ್ಲೂ ಕೂಡ ಅವರು ತಮ್ಮ ನಿರ್ಧಾರವನ್ನು ಮಂಡಿಸಿರಲಿಲ್ಲ. ಆದರೆ ಇಂದು ಮಂಡ್ಯದಲ್ಲಿ ನಡೆದ ಸಭೆಯಲ್ಲಿ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ. ಆದರೆ, ಇತ್ತ ಕುಮಾರಸ್ವಾಮಿ ಮಾತ್ರ ಬಿಜೆಪಿ ಸೇರುವ ಸುಮಲತಾ ಅವರ ನಿರ್ಧಾರ ನನಗು ಬೆಂಬಲ ಕೊಟ್ಟಂತೆ ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆಯಿಂದ ಹಿಂದೆ ಸರಿಯುವ ಸುಮಲತಾ ಅವರ ನಿರ್ಧಾರವನ್ನು ಸ್ವಾಗತಿಸುತ್ತೇವೆ ಎಂದು ಮಂಡ್ಯ ತಾಲೂಕಿನ ಹೊಳಲು ಗ್ರಾಮದಲ್ಲಿ ಕುಮಾರಸ್ವಾಮಿ ಮಾಧ್ಯಮಗಳಿಗೆ ತಿಳಿಸಿದರು.ಬಿಜೆಪಿ ಸೇರುವ ನಿರ್ಧಾರ ಪ್ರಕಟಿಸಿದ್ದರಿಂದ ನನಗೆ ಬೆಂಬಲ ಕೊಟ್ಟಂತೆ. ಇಂದು ಅವರು ಈ ನಿರ್ಧಾರ ಕೈಗೊಂಡಿದ್ದು, ಚುನಾವಣಾ ಚಟುವಟಿಕೆಗೆ ಕರೆ ನೀಡುವುದಾಗಿ ಹೇಳಿದ್ದಾರೆ.