ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದರ್ಶನ್ ಅರೆಸ್ಟ್ ಆಗಿದ್ದಾರೆ. ಈ ಬೆನ್ನಲ್ಲೇ ನಟಿ ಸುಮಲತಾ ಮೌನಕ್ಕೆ ಶರಣಾಗಿದ್ದರು.ಸದಾ ದರ್ಶನ್ ಪರ ನಿಲ್ಲುತ್ತಿದ್ದ ಸುಮಲತಾ ಅವರು ರೇಣುಕಾಸ್ವಾಮಿ ಕೊಲೆ ಕೇಸ್ ಬಗ್ಗೆ ಏನು ಪ್ರತಿಕ್ರಿಯೆ ಕೊಡಬಹುದು ಎಂದು ಕಾಯುತ್ತಿದ್ದವರಿಗೆ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಎಲ್ಲವೂ ಸರಿ ಹೋಗುವ ಮೊದಲು ಬಹಳಷ್ಟು ತಪ್ಪಾಗುತ್ತೆ ನಂಬಿಕೆ ಇಟ್ಟುಕೊಳ್ಳಿ ಎಂದು ಸುಮಲತಾ ಇನ್ಸ್ಟಾಗ್ರಾಂ ಪೋಸ್ಟ್ ಮಾಡಿದ್ದಾರೆ. ಕೃಷ್ಣನ ನುಡಿ ಬರೆದು ಪೋಸ್ಟ್ ಮಾಡಿದ್ದಾರೆ.
ಇನ್ನೂ ದರ್ಶನ್ರನ್ನು ಇಂದು (ಜು.1) ವಿಜಯಲಕ್ಷ್ಮಿ, ಪುತ್ರ ವಿನೀಶ್, ಮೀನಾ ತೂಗುದೀಪ್, ಸಹೋದರ ದಿನಕರ್ ಭೇಟಿ ನೀಡಿ ಧೈರ್ಯ ಹೇಳಿ ಬಂದಿದ್ದಾರೆ.