ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ಮೋದಿ ಅವರ ಶೈಕ್ಷಣಿಕ ಪದವಿಗೆ ಸಂಬಂಧಿಸಿದಂತೆ ಗುಜರಾತ್ ವಿಶ್ವವಿದ್ಯಾಲಯ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ನ ಅಹಮದಾಬಾದ್ನ ನ್ಯಾಯಾಲಯವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರಿಗೆ ಹೊಸದಾಗಿ ಸಮನ್ಸ್ ಜಾರಿ ಮಾಡಿದೆ.
ಇಬ್ಬರಿಗೂ ಜೂನ್ 7ರಂದು ಹಾಜರಾಗುವಂತೆ ಸೂಚಿಸಲಾಗಿದೆ.
ಮೇ 23ರಂದು ಹಾಜರಾಗುವಂತೆ ಇಬ್ಬರಿಗೂ ನೋಟಿಸ್ ನೀಡಲಾಗಿತ್ತು. ಆದರೆ ಅವರು ನ್ಯಾಯಾಲಯಕ್ಕೆ ಹಾಜರಾಗಿಲ್ಲದ ಕಾರಣ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್.ಜೆ.ಪಾಂಚಾಲ್ ಅವರು ಕೇಜ್ರಿವಾಲ್ ಮತ್ತು ಸಿಂಗ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ.