ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆಶಿಗೆ ಸಮನ್ಸ್: ಖುದ್ದು ಹಾಜರಾಗುವಂತೆ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಸಭೆ ಚುನಾವಣೆ (Karnataka Assembly Elections 2023) ವೇಳೆ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧದ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ (Rahul Gandhi), ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah), ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್​​​ಗೆ ಕೋರ್ಟ್​ ಸಮನ್ಸ್​ ಜಾರಿ ಮಾಡಿದೆ.

ಕಾಂಗ್ರೆಸ್(Congress) ವಿರುದ್ಧ ಬಿಜೆಪಿ ಖಾಸಗಿ ದೂರು ನೀಡಿತ್ತು. ಈ ದೂರಿನ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ (Bengaluru) 42ನೇ ACMM ಕೋರ್ಟ್, ಮಾರ್ಚ್ 28ಕ್ಕೆ ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಕಾಂಗ್ರೆಸ್​ 40% ಕಮಿಷನ್ ಮತ್ತಿತರ ಆರೋಪಗಳನ್ನು ಮಾಡಿತ್ತು. ಅಲ್ಲದೇ ಭ್ರಷ್ಟಾಚಾರ ರೇಟ್ ಕಾರ್ಡ್ ಜಾಹೀರಾತು ನೀಡಿತ್ತು. ಈ ಜಾಹಿರಾತಿನಿಂದ ಬಿಜೆಪಿ ಪಕ್ಷಕ್ಕೆ ಹಾನಿಯಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿತ್ತು..

ಬೆಂಗಳೂರಿನ 42ನೇ ACMM ಕೋರ್ಟ್ ಜಡ್ಜ್ ಜೆ.ಪ್ರೀತ್ ಅವರು, ಮಾರ್ಚ್ 28ಕ್ಕೆ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಖುದ್ದು ಹಾಜರಾಗುವಂತೆ ಸಮನ್ಸ್​ ನೀಡಿ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!