ಬೆಂಕಿಯ ಮಳೆಗರೆಯಲಿದ್ದಾನೆ ಸೂರ್ಯ: ಕಾಸರಗೋಡು ಸಹಿತ ಕೇರಳದ ಹತ್ತು ಜಿಲ್ಲೆಗಳಿಗೆ ಎಚ್ಚರಿಕೆ ರವಾನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂದಿನ ಎರಡು ದಿನಗಳ ಕಾಲ ಕಾಸರಗೋಡು ಜಿಲ್ಲೆಯ ಸಹಿತ ಕೇರಳದ ಹತ್ತು ಜಿಲ್ಲೆಗಳಲ್ಲಿ ಬಿಸಿಲು ಅಕ್ಷರಶಃ ಬೆಂಕಿಯಂತೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ದಿನಗಳಲ್ಲಿ ಸಾಮಾನ್ಯಕ್ಕಿಂಥ ಬರೋಬ್ಬರಿ ನಾಲ್ಕು ಡಿಗ್ರಿ ಹೆಚ್ಚಿನ ತಾಪಮಾನ ದಾಖಲಾಗುವ ಸಾಧ್ಯತೆ ಹೆಚ್ಚಾಗಿದ್ದು, ನಾಗರಿಕರು ಹೆಚ್ಚಿನ ಎಚ್ಚರಿಕೆಯಲ್ಲಿ ಇರುವಂತೆ ಆರೋಗ್ಯ ಇಲಾಖೆ ಕೂಡಾ ಸಲಹೆ ನೀಡಿದೆ.

ರಾಜ್ಯದ ತ್ರಿಶೂರ್, ಪಾಲಕ್ಕಾಡ್‌ಗಳಲ್ಲಿ ಅತೀ ಹೆಚ್ಚು ಅಂದರೆ 39, ಕೋಝಿಕ್ಕೋಡ್, ಕಣ್ಣೂರುಗಳಲ್ಲಿ 38 ಡಿಗ್ರಿ, ಪತ್ತನಂತಿಟ್ಟ, ಕಾಸರಗೋಡು ಜಿಲ್ಲೆಗಳಲ್ಲಿ37, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಳಂ, ಮಲಪ್ಪುರಂ ಜಿಲ್ಲೆಗಳಲ್ಲಿ ಮುಂದಿನ ಒಂದೆರಡು ದಿನ 36 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!