ಸಿಎಂ ಸಿದ್ದರಾಮಯ್ಯ ಪ್ರಧಾನ ಸಲಹೆಗಾರರಾಗಿ ಸುನೀಲ್ ಕನುಗೋಲು ನೇಮಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಧಾನ ಸಲಹೆಗಾರರಾಗಿ ಚುನಾವಣಾ ತಂತ್ರಗಾರ ಸುನೀಲ್ ಕನುಗೋಲು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕನುಗೋಲು ಚುನಾವಣಾ ತಂತ್ರಗಾರಿಕೆ ಹೆಣೆದಿದ್ದರು. ಇದೀಗ ಸಿದ್ದರಾಮಯ್ಯ ಅವರು, ಕನುಗೋಲು ಅವರನ್ನೇ ಪ್ರಧಾನ ಸಲಹೆಗಾರರನ್ನಾಗಿ ನೇಮಿಸಿಕೊಳ್ಳಲು ಸೂಚನೆ ನೀಡಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಪೇಸಿಎಂ ಅಭಿಯಾನ ಕೈಗೊಂಡಿದ್ದರು. ಇದು ಬಿಜೆಪಿಗೆ ಭಾರೀ ಆಘಾತ ನೀಡಿತ್ತು, 40% ಸರ್ಕಾರ ಅನ್ನೋ ಕ್ಯಾಂಪೇನ್‌ ಅನ್ನು ಕಾಂಗ್ರೆಸ್‌ ಮಾಡಿತ್ತು. ಪೇ ಸಿಎಂ ಅಭಿಯಾನ, ಭಾರತ್ ಜೋಡೋ ಯಾತ್ರೆ ಯೋಜಿಸಿದ ಕೀರ್ತಿ ಸುನಿಲ್ ಕನುಗೋಲು ಅವರಿಗೆ ಸಲ್ಲುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!