ಹೊಸದಿಗಂತ ವರದಿ,ಕುಮಟಾ :
ಕುಮಟಾದಲ್ಲಿ ಆರಂಭಿಸಲು ಉದ್ದೇಶಿಸಿರುವ ಬಹುನಿರೀಕ್ಷಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಕುರಿತು ರಾಜ್ಯ ಬಜೆಟ್ ನಲ್ಲಿ ಘೋಷಿಸಲಾಗಿದೆ.
ಇದಕ್ಕೆ ಖುಷಿ ವ್ಯಕ್ತಪಡಿಸಿದ ಸಚಿವ ಶಿವರಾಮ ಹೆಬ್ಬಾರ್, ಉತ್ತರ ಕನ್ನಡ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ಸಲ್ಲಿಸಿದ ನಮ್ಮ ಕೋರಿಕೆಯನ್ನು ಪುರಸ್ಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಜಿಲ್ಲೆಯ ಸಮಸ್ತ ಜನತೆಯ ಪರವಾಗಿ ಧನ್ಯವಾದ ತಿಳಿಸಿದ್ದಾರೆ.