ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೋಲೀಸ್ ಠಾಣೆಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿದ್ದ ಸಮಾಜವಾದಿ ಪಕ್ಷದ ಆಜಂ ಖಾನ್ ಗೆ ಸುಪ್ರಿಂ ಕೋರ್ಟ್ ಜಾಮೀನು ನೀಡಿದ ಬೆನ್ನಲ್ಲೇ ಉತ್ತರ ಪ್ರದೇಶದ ಸೀತಾಪುರ ಜಿಲ್ಲಾ ಕಾರಾಗೃಹದಿಂದ ಅವರನ್ನು ಬಿಡುಗಡೆ ಮಾಡಲಾಗಿದೆ. ಭೂಕಬಳಿಕೆ ಸೇರಿದಂತೆ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಅಜಂ ಖಾನ್ ಎರಡು ವರ್ಷಗಳ ಕಾಲ ಜೈಲಿನಲ್ಲಿದ್ದರು.
ಅವರ ಮೇಲಿರುವ 89 ಪ್ರಕರಣಗಳ ಪೈಕಿ 88 ಪ್ರಕರಣಗಳಿಗೆ ಜಾಮೀನು ಸಿಕ್ಕಿದೆ. ಅವರ ಜಾಮೀನು ಅರ್ಜಿಯನ್ನು ವಿಚಾರಿಸಿದ ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ನೇತೃತ್ವದ ಪೀಠವು “ಪ್ರಸ್ತುತ ಪ್ರಕರಣದಲ್ಲಿ ಸತ್ಯವು ವಿಚಿತ್ರವಾಗಿರುವುದರಿಂದ ಸಂವಿಧಾನದ 142ನೇ ವಿಧಿಯ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಖಾನ್ಗೆ ಮಧ್ಯಂತರ ಜಾಮೀನು ನೀಡಿದೆ.