ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ಕೇಡರ್ನ ವಜಾಗೊಂಡ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ಗೆ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.
ಹುದ್ದೆ ಪಡೆಯಲು ಖೇಡ್ಕರ್ ನಕಲಿ ಒಬಿಸಿ ಮತ್ತು ಪಿಡಬ್ಲ್ಯೂಬಿಡಿ (ವಿಕಲಚೇತನ ವ್ಯಕ್ತಿಗಳು) ಪ್ರಮಾಣಪತ್ರಗಳನ್ನು ಸಲ್ಲಿಸಿದ ಆರೋಪವನ್ನು ಎದುರಿಸಿದ್ದರು.
ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ ವಿ ನಾಗರತ್ನ ಮತ್ತು ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠ ಖೇಡ್ಕರ್ಗೆ ಸಂಪೂರ್ಣ ತನಿಖೆಗೆ ಸಹಕಾರ ನೀಡುವಂತೆ ಸೂಚಿಸಿದ್ದು, 35 ಸಾವಿರ ರೂ. ಶೂರಿಟಿ ನೀಡುವಂತೆ ಸೂಚಿಸಿದೆ.
ಆಕೆ ಮಾಡಿರುವ ಘೋರ ತಪ್ಪು ಏನು. ಆಕೆ ಡ್ರಗ್ಗ್ ಮಾರಾಟ ಮಾಡುತ್ತಿಲ್ಲ. ಅಥವಾ ಭಯೋತ್ಪಾದಕಿ ಅಲ್ಲ. ಆಕೆ ಕೊಲೆ ಮಾಡಿಲ್ಲ. ಎನ್ಡಿಪಿಎಸ್ ಆರೋಪಿಯಲ್ಲ ಎಂದು ತಿಳಿಸಿ, ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ನಕಲಿ ಪ್ರಮಾಣ ಪತ್ರ ನೀಡುವ ಮೂಲಕ ದೇಶದ ಅತ್ಯುನ್ನತ ನಾಗರಿಕ ಸೇವೆಯಲ್ಲಿ ಹುದ್ದೆ ಪಡೆದಿದ್ದ ಖೇಡ್ಕರ್ಗೆ ಬಂಧನದಿಂದ ರಕ್ಷಣೆ ನೀಡಿ ಈ ಹಿಂದೆ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ನೀಡಿತ್ತು.
ನಿರೀಕ್ಷಣಾ ಜಾಮೀನು ಮನವಿಯನ್ನು ತಿರಸ್ಕರಿಸಿದ್ದ ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಮಾಜಿ ಅಧಿಕಾರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.