ಅನರ್ಹತೆ ನೋಟಿಸ್ ಕುರಿತು ಸುಪ್ರೀಂ ಆದೇಶ: ಬಾಳಸಾಹೇಬ್, ಆನಂದ್ ದಿಘೆಗೆ ಸಂದ ಜಯ ಎಂದ ಬಂಡಾಯ ನಾಯಕ ಶಿಂಧೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಹಾರಾಷ್ಟ ಸರಕಾರಕ್ಕೆ ಚಾಟಿ ಬೀಸಿ ಅನರ್ಹತೆ ನೋಟಿಸ್ ಕುರಿತು ಸುಪ್ರೀಂಕೋರ್ಟ್ ನೀಡಿರುವ ಆದೇಶ ಬಾಳ ಠಾಕ್ರೆ ಮತ್ತು ಆನಂದ್ ದಿಘೆ ಅವರಿಗೆ ಸಂದ ಜಯವಾಗಿದೆ ಎಂದು ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಹೇಳಿದ್ದಾರೆ.
ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ಟ್ವೀಟ್ ಮಾಡಿರುವ ಏಕನಾಥ್ ಶಿಂಧೆ, ಇದು ಹಿಂದುತ್ವ ಸಾಮ್ರಾಟ ಬಾಳಸಾಹೇಬ್ ಠಾಕ್ರೆ ಅವರ ಹಿಂದೂತ್ವ ಮತ್ತು ಧರ್ಮವೀರ್ ಆನಂದ್ ದಿಘೆ ಸಾಹೇಬ್ ಅವರ ಚಿಂತನೆಗೆ ಸಂದ ಗೆಲುವು ಎಂದಿದ್ದಾರೆ.

ಅನರ್ಹತೆ ನೋಟಿಸ್‌ಗೆ ಉತ್ತರಿಸಲು 16 ಅತೃಪ್ತ ಶಾಸಕರಿಗೆ ಉಪಸಭಾಪತಿ ನೀಡಿದ ಸಮಯವನ್ನು ಜುಲೈ 11 ರವರೆಗೆ ಸುಪ್ರೀಂಕೋರ್ಟ್ ವಿಸ್ತರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!