ಭೋಜಶಾಲಾ ದೇಗುಲದಲ್ಲಿನ ಸಮೀಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಧ್ಯಪ್ರದೇಶದ ಧಾರ್‌ನಲ್ಲಿರುವ ಭೋಜಶಾಲಾ ದೇಗುಲದಲ್ಲಿನ ಸಮೀಕ್ಷೆಗೆ ನೀಡಿದ್ದ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಇದರಿಂದ ಭೋಜಶಾಲಾ ದೇಗುಲದಲ್ಲಿನಸರಸ್ವತಿ ದೇಗುಲದ ಧ್ವಂಸಗೊಳಿಸಿ ಕಮಲಾ ಮಸೀದಿ ನಿರ್ಮಿಸಲಾಗಿದೆ ಅನ್ನೋ ಹೋರಾಟದಲ್ಲಿ ಹಿಂದುಗಳಿಗೆ ಮತ್ತೊಂದು ಗೆಲುವು ಸಿಕ್ಕಿದೆ.

ಕಮಲಾ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ವಿವಾದಿತ ಆವರಣ, ಯಾರಿಗೆ ಸೇರಿದ್ದು ಅನ್ನೋದು ಸಾಕ್ಷ್ಯಕ್ಕಾಗಿ ಭಾರತೀಯ ಪುರಾತತ್ವ ಇಲಾಖೆ ಸಮೀಕ್ಷೆ ನಡೆಸುತ್ತಿದೆ. ಇದಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಇತ್ತೀಚೆಗೆ ಮಧ್ಯಪ್ರದೇಶ ಹೈಕೋರ್ಟ್ ಈ ವಿವಾದ ಅಂತ್ಯಗೊಳಿಸಲು ಭಾರತೀಯ ಪುರಾತತ್ವ ಇಲಾಖೆಗೆ ಸಮೀಕ್ಷೆ ನಡೆಸುವಂತೆ ಆದೇಶಿಸಿತ್ತು. ಇದರಂತೆ ಭಾರತೀಯ ಪುರಾತತ್ವ ಇಲಾಖೆ ದೇಗುಲ ಹಾಗೂ ಮಸೀದಿ ಆವರಣದಲ್ಲಿ ಸಮೀಕ್ಷೆ ನಡೆಸುತ್ತಿದೆ. ಆದರೆ ಹೈಕೋರ್ಟ್ ನೀಡಿದ ಆದೇಶ ಪೂಜಾ ಕಾಯ್ದೆಗೆ ವಿರುದ್ಧವಾಗಿದೆ. ಇದು ಹಿಂದು ದೇಗುಲವಲ್ಲ, ಕಮಲಾ ಮಸೀದಿ ಎಂದು ಮಸೀದಿ ಮುಸ್ಲಿಮ್ ಸಮಿತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ತಕ್ಷಣವೇ ಸಮೀಕ್ಷೆಗೆ ತಡೆ ಕೋರಬೇಕು. ಮಸೀದಿಯಲ್ಲಿ ಯಥಾ ಸ್ಥಿತಿ ಕಾಪಾಡಬೇಕು ಎಂದು ಮುಸ್ಲಿಮ್ ಸಮಿತಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿತ್ತು. ಆದರೆ ಮುಸ್ಲಿಂ ಸಮಿತಿಯ ಮನವಿ ತರಿಸ್ಕರಿಸಿದ ಸುಪ್ರೀಂ ಕೋರ್ಟ್, ಸಮೀಕ್ಷೆಗೆ ತಡೆ ನೀಡಲು ನಿರಾಕರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!