ಹೊಸದಿಗಂತ ಪುತ್ತೂರು:
ಬಜರಂಗದಳದ ನಾಲ್ವರು ಕಾರ್ಯಕರ್ತರ ಗಡಿಪಾರು ಆದೇಶಕ್ಕೆ ಕರ್ನಾಟಕ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಸಂಪ್ಯ ನಿವಾಸಿ ಪ್ರಜ್ವಲ್, ತಿಂಗಳಾಡಿಯ ನಿತಿನ್ , ದಿನೇಶ್ ಹಾಗು ಒಳಮೊಗ್ರು ಗ್ರಾಮದ ಅಜಲಡ್ಕ ನಿವಾಸಿ ಪ್ರದೀಪ್ ಎಂಬವರನ್ನು ಬಾಗಲಕೋಟೆ ಜಿಲ್ಲೆಗೆ ಗಡೀಪಾರು ಮಾಡಲು ಪೊಲೀಸ್ ಇಲಾಖೆ ಶಿಫಾರಸು ಮಾಡಿತ್ತು.
ಆರೋಪಿಗಳ ಪರವಾಗಿ ನ್ಯಾಯವಾದಿ ಸುಯೋಗ್ ಹೇರಳೆ ವಾದ ಮಂಡಿಸಿದ್ದರು