ಹೊಸದಿಗಂತ ಡಿಜಿಟಲ್ ಡೆಸ್ಕ್:
BBMP ಅಧಿಕಾರಿಗಳ ಸಭೆಯಲ್ಲಿ ಸುರ್ಜೇವಾಲ ಭಾಗಿಯಾದ ವಿಚಾರ ರಾಜ್ಯದಲ್ಲಿ ಕೋಲಾಹಲ ಸೃಸ್ಟಿಸಿದ್ದು, ಬಿಜೆಪಿ, ಜೆಡಿಎಸ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಬಿಜೆಪಿ ನಾಯಕರು ಯಾರಿಗೆ ಬೇಕಾದರೂ ದೂರು ನೀಡಲಿ. ನಾವು ನಿನ್ನೆ ಯಾವುದೇ ಮೀಟಿಂಗ್ ಮಾಡಿಯೇ ಇಲ್ಲ ಎಂದು ತಿಳಿಸಿದ್ದಾರೆ.
ನಿನ್ನೆ ನಾವು ಯಾವುದೇ ಸಭೆಯನ್ನೇ ನಡೆಸಿಲ್ಲ. ಸುರ್ಜೇವಾಲಾಗೂ ಬಿಬಿಎಂಪಿ ಸಭೆಗೂ ಯಾವುದೇ ಸಂಬಂಧವಿಲ್ಲ, ನಾನೂ ಕೂಡ ಯಾವುದೇ ಸಭೆ ನಡೆಸಿಲ್ಲ ಎಂದು ಹೇಳಿದರು.
ನಿನ್ನೆ ನಾನು ಬೆಂಗಳೂರು ಸಿಟಿ ರೌಂಡ್ಸ್ ಹೋಗಿದ್ದೆ. ನನ್ನನ್ನು ಕರೆದೊಯ್ಯಲು ಅಧಿಕಾರಿಗಳು ಬಂದಿದ್ದರು. ನಿನ್ನೆ ಯಾವುದೇ ಅಧಿಕೃತವಾದ ಸಭೆಯನ್ನು ನಡೆಸಿಲ್ಲ. ಬಿಜೆಪಿಯವರು ರಾಜ್ಯಪಾಲರಿಗೆ ದೂರು ನೀಡುವುದಾದರೆ ನೀಡಲಿ. ನಿನ್ನೆ ಯಾವ ಸಭೆ, ಮೀಟಿಂಗೂ ಮಾಡಿಲ್ಲ ಎಂದು ಹೇಳಿದರು.