ರೈತನಿಂದ ಲಂಚ ಪಡೆಯುತ್ತಿದ್ದ ಸರ್ವೆ ಸೂಪರ್‌ವೈಸರ್ ಎಸಿಬಿ ಬಲೆಗೆ

ಹೊಸದಿಗಂತ ವರದಿ,ಶ್ರೀರಂಗಪಟ್ಟಣ:

ರೈತನೋರ್ವನಿಂದ ಲಂಚ ಪಡೆಯುತ್ತಿದ್ದ ವೇಳೆ ತಾಲೂಕು ಕಚೇರಿಯ ಭೂ ಮಾಪನ ಇಲಾಖೆ ಸರ್ವೇ ಸೂಪರ್ ವೈಸರ್ ಲೋಕೇಶ್ ಎಸಿಬಿ ಬಲೆಗೆ ಬಿದ್ದಿದ್ದಾರೆ.
ತಾಲೂಕಿನ ಸಿದ್ದಾಪುರ ಗ್ರಾಮದ ಸರ್ವೆ ನಂ. 21 ರ ಜಮೀನು ದುರಸ್ತಿ ಮಾಡಿಸುವ ಸಂಬಂದ ರೈತ ಕೆಂಪೇಗೌಡ ಅವರಿಂದ 15 ಸಾವಿರ ರು.ಗಳ ಬೇಡಿಕೆ ಇಟ್ಟಿದ್ದು, ಮುಂಗಡವಾಗಿ 3 ಸಾವಿರ ರು. ನೀಡಿದ್ದ ರೈತ ಮಂಗಳವಾರ ಭೂ ಮಾಪನ ಶಾಖೆಯಲ್ಲಿ 10 ಸಾವಿರ ರು. ನೀಡುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ಸಾಕ್ಷಿ ಸಮೇತ ಲೋಕೇಶ್ ನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ಎಸಿಬಿ ಕಛೇರಿಗೆ ಈ ಮೊದಲೇ ರೈತ ಕೆಂಪೇಗೌಡ ದೂರು ನೀಡಿದ್ದ ಹಿನ್ನಲೆಯಲ್ಲಿ ಕಾರ್ಯಪ್ರೌವೃತ್ತರಾಗಿದ್ದ ಎಸಿಬಿ ಅಧಿಕಾರಿಗಳು, ಡಿವೈಎಸ್‌ಪಿ ಧರ್ಮೇಂದ್ರ ನೇತೃತ್ವದಲ್ಲಿ ದಾಳಿ ನಡೆಸಿ ಲಂಚ ಪಡೆಯುತ್ತಿದ್ದ ಸರ್ವೆ ಅಧಿಕಾರಿ ಲೋಕೇಶ್ ನನ್ನು ಖೆಡ್ಡಾಗೆ ಬೀಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಕಾನೂನು ಕ್ರಮಕೈಗೊಂಡಿದ್ದಾರೆ.
ದಾಳಿ ವೇಳೆ ಇನ್ಸ್‌ಪೆಕ್ಟರ್ ಪುರುಷೋತ್ತಮ, ವಿನೋದ್ ರಾಜ್, ಸಿಬ್ಬಂದಿಗಳಾದ ಶಿವರಾಜು, ಮಹದೇವು, ಕುಮಾರ್, ಪಾಪಣ್ಣ, ವೆಂಕಟೇಶ್, ಮಹೇಶ್ ಸೇರಿದಂತೆ ಇತರರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!