July 21, 2026
Tuesday, July 21, 2026
spot_img

ಕಾಪು ಮಾರಿಗುಡಿಗೆ ಸೂರ್ಯಕುಮಾರ್ ಪತ್ನಿ ದೇವಿಶಾ ಶೆಟ್ಟಿ ಭೇಟಿ: ದೇವಿಗೆ ವಿಶೇಷ ಪೂಜೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಟಿ20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ ಅವರು ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸೂರ್ಯಕುಮಾರ್ ಅವರು ಸದ್ಯ ಆಸ್ಟ್ರೇಲಿಯಾ ಪ್ರವಾಸದಲ್ಲಿ ಟಿ20 ಸರಣಿಯಲ್ಲಿ ತೊಡಗಿರುವ ಸಂದರ್ಭದಲ್ಲಿ, ದೇವಿಶಾ ಶೆಟ್ಟಿ ಅವರು ದೇವಿಯ ದರ್ಶನ ಪಡೆದಿರುವುದು ವಿಶೇಷವಾಗಿದೆ.

ದೇವಿಯ ಅನುಗ್ರಹ ಮತ್ತು ಗೌರವ

ದೇವಿಶಾ ಶೆಟ್ಟಿ ಅವರು ದೇವಸ್ಥಾನಕ್ಕೆ ಆಗಮಿಸಿದಾಗ, ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿಗಳು ಅವರು ಅಮ್ಮನ ಅನುಗ್ರಹ ಪ್ರಸಾದ ನೀಡಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ, ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ದೇವಿಶಾ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ದಂಪತಿ ನೀಡಿದ ವಿಶೇಷ ಸೇವೆ

ದೇವಸ್ಥಾನದ ಪ್ರಾಂಗಣದ ಮುಂಭಾಗದಲ್ಲಿ ಪ್ರತಿಷ್ಠಾಪಿಸಲಾಗಿರುವ ಬೃಹತ್ ಕಲ್ಲಿನ ಕಂಬವನ್ನು (ಸ್ಥಂಭ) ಸೂರ್ಯಕುಮಾರ್ ಮತ್ತು ದೇವಿಶಾ ದಂಪತಿ ಸೇವಾ ರೂಪದಲ್ಲಿ ನೀಡಿದ್ದಾರೆ. ದೇವಿಶಾ ಶೆಟ್ಟಿ ಅವರು ಅದೇ ಕಲ್ಲಿನ ಕಂಬದ ಮುಂದೆ ನಿಂತು ಭಕ್ತಿಪೂರ್ವಕವಾಗಿ ಛಾಯಾಚಿತ್ರ ತೆಗೆಸಿಕೊಂಡಿದ್ದಾರೆ. ಕ್ರಿಕೆಟ್ ಅಂಗಳದಲ್ಲಿ ತಮ್ಮ ಪತಿಯ ಯಶಸ್ಸಿಗಾಗಿ ಅವರು ದೇವಿಯಲ್ಲಿ ಪ್ರಾರ್ಥಿಸಿರುವುದು ಕಂಡುಬಂದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !