ಹೊಸದಿಗಂತ ಡಿಜಿಟಲ್ ಡೆಸ್ಕ್:
ಸುಶಾಂತ್ ಸಿಂಗ್ ರಜಪೂತ್ ನಿಧನದ ವಿಷಯ ಈಗಲೂ ರಹಸ್ಯವಾಗಿಯೇ ಉಳಿದಿದೆ. ಇದು ಕೊಲೆಯೋ ಆತ್ಮಹತ್ಯೆಯೋ ಎನ್ನುವ ಬಗ್ಗೆ ಇನ್ನೂ ತನಿಖೆ ನಡೆಯುತ್ತಿದೆ.
ಈ ಮಧ್ಯೆ ಗಂಭೀರವಾಗ ಆರೋಪವೊಂದು ಕೇಳಿಬಂದಿದ್ದು, ಸುಶಾಂತ್ರದ್ದು ಕೊಲೆ ಎಂದು ಸೂಚಿಸುತ್ತಿದೆ.
ಸುಶಾಂತ್ ಸಿಂಗ್ ಮರಣೋತ್ತರ ಪರೀಕ್ಷೆಯಲ್ಲಿ ಭಾಗಿಯಾದ ಕೂಪರ್ ಆಸ್ಪತ್ರೆ ಸಿಬ್ಬಂದಿ ಸುಶಾಂತ್ ದೇಹದ ಮೇಲೆ ಸಾಕಷ್ಟು ಗಾಯಗಳಿದ್ದವು, ಅವರನ್ನು ಯಾರೋ ಹೊಡೆದಿದ್ದರು ಎಂದು ಹೇಳಿದ್ದಾರೆ.
ಕೂಪರ್ ಆಸ್ಪತ್ರೆಯ ಶವಾಗಾರದಲ್ಲಿ ಕೆಲಸ ಮಾಡುತ್ತಿದ್ದ ರೂಪಕುಮಾರ್ ಶಾ, ಸುಶಾಂತ್ ದೇಹದ ಮರಣೋತ್ತರ ಪರೀಕ್ಷೆ ವೇಳೆ ಏನಾಗಿತ್ತು ಎಂದು ತಿಳಿಸಿದ್ದಾರೆ. ನಾನು ಅಲ್ಲಿಯೇ ಇದ್ದೆ. ಇದು ಕೊಲೆ ಎಂದು ಹೇಳುತ್ತಲೇ ಇದ್ದೆ, ಯಾರೂ ನನ್ನ ಮಾತನ್ನು ಕೇಳಿಲ್ಲ. ಯಾರ ಕೆಲಸಕ್ಕೂ ತೊಂದರೆಯಾಗಬಾರದು ಎಂದು ಇಷ್ಟು ದಿನ ಸುಮ್ಮನಿದ್ದೆ ಎಂದು ಶಾ ಹೇಳಿದ್ದಾರೆ.