ಗಡಿ ನಿಯಂತ್ರಣ ರೇಖೆ ದಾಟುತ್ತಿದ್ದ ಶಂಕಿತ ಮಹಿಳೆಗೆ ಗುಂಡಿಕ್ಕಿದ ಭದ್ರತಾ ಪಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಮ್ಮು ಮತ್ತು ಕಾಶ್ಮೀರದಲ್ಲಂತೂ ಉಗ್ರರ ಹಾವಳಿ ಹೆಚ್ಚಾಗುತ್ತಲೇ ಇದೆ. ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯನ್ನು ಅಪರಿಚಿತ ಮಹಿಳೆಯೊಬ್ಬಳು ದಾಟಿದ್ದು, ಪಾಕ್ ನುಸುಳುಕೋರಳೆಂದು ಶಂಕಿಸಿ ಭಾರತದ ಭದ್ರತಾ ಪಡೆಗಳು ಸೋಮವಾರ ಗುಂಡಿಕ್ಕಿ ಹತ್ಯೆ ಮಾಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಅಪರಿಚಿತ ಶಂಕಿತ ಮಹಿಳೆ ಬಾರಾಮುಲ್ಲಾ ಜಿಲ್ಲೆಯ ಕಮಲಕೋಟೆ ಪ್ರದೇಶದಲ್ಲಿ ನಿಯಂತ್ರಣ ರೇಖೆ ದಾಟಿ ಗಡಿ ಬೇಲಿಯ ಸಮೀಪ ಬರುತ್ತಿದ್ದಳು. ಆಕೆಗೆ ಸೈನಿಕರು ಎಚ್ಚರಿಕೆ ನೀಡಿದರೂ ಮಹಿಳೆ ಗಮನ ಹರಿಸಲಿಲ್ಲ. ಇದರಿಂದಾಗಿ ಭದ್ರತಾ ಪಡೆಗಳು ಆಕೆಯ ಮೇಲೆ ಗುಂಡು ಹಾರಿಸಿದರು, ಇದರ ಪರಿಣಾಮವಾಗಿ ಆಕೆ ಸಾವನ್ನಪ್ಪಿದ್ದಾಳೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!