ಹೊಸದಿಗಂತ ಡಿಜಿಟಲ್ ಡೆಸ್ಕ್
ಬಿಜೆಪಿ ರಾಷ್ಟ್ರೀಯ ವಕ್ತಾರೆ ಹುದ್ದೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಂಡ ನೂಪುರ್ ಶರ್ಮಾ ಇದೀಗ ಪ್ರವಾದಿ ಮುಹಮ್ಮದ್ ಅವರ ಕುರಿತು ತಾವು ನೀಡಿದ್ದ ಆಕ್ಷೇಪಾರ್ಹ ಹೇಳಿಕೆಯನ್ನು ಹಿಂಪಡೆದಿದ್ದಾರೆ.
ಟಿವಿ ಚರ್ಚೆಯೊಂದರಲ್ಲಿ ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಬೇಷರತ್ತಾಗಿ ಹಿಂಪಡೆದಿದ್ದು, ಯಾರೊಬ್ಬರ ಧಾರ್ಮಿಕ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಲ್ಲ ಎಂದು ಹೇಳಿದ್ದಾರೆ.
ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಬಂದ ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮತ್ತು ವಕ್ತಾರೆ ಹುದ್ದೆಯಿಂದ ಅಮಾನತುಗೊಳಸಿತ್ತು.