ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್ನ ಮೊರ್ಬಿಯಲ್ಲಿ ತೂಗು ಸೇತುವೆ ಕುಸಿದು ಸುಮಾರು 400 ಜನರು ನದಿಗೆ ಬಿದ್ದಿದ್ದು, ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 30ಕ್ಕೇ ಏರಿಕೆಯಾಗಿದೆ.
ಅಪಘಾತದ ಬಗ್ಗೆ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಅವರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ, ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ವೇಳೆ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳನ್ನು ಮತ್ತು ಗಾಯಗೊಂಡವರಿಗೆ 50,000 ರೂ. ನೀಡಲು ಪ್ರಧಾನಿ ಮೋದಿ ಸೂಚಿಸಿದ್ದಾರೆ.