Thursday, January 29, 2026
Thursday, January 29, 2026
spot_img

ಒಂದು ಇಂಜೆಕ್ಷನ್ ಸುತ್ತ ಅನುಮಾನ: ರಾಜಸ್ಥಾನದ ಸಾಧ್ವಿ ಪ್ರೇಮ್ ಬೈಸಾ ನಿಗೂಢ ಸಾವು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನದ ಖ್ಯಾತ ಧಾರ್ಮಿಕ ಪ್ರವಚನಕಾರ್ತಿ ಸಾಧ್ವಿ ಪ್ರೇಮ್ ಬೈಸಾ ನಿಗೂಢವಾಗಿ ಮೃತಪಟ್ಟಿದ್ದಾರೆ.

ಬೋರಾನಾಡಾ ಆಶ್ರಮದಿಂದ ಸಾಧ್ವಿ ಪ್ರೇಮ್ ಬೈಸಾ ಅವರನ್ನು ಅವರ ತಂದೆ ವೀರಂ ನಾಥ್ ಹಾಗೂ ಮತ್ತೊಬ್ಬ ಸಹಾಯಕ ಜೋಧಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ವೈದ್ಯರು ಅವರು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಇತ್ತ್ತಸಾಧ್ವಿಯ ನಿಧನದ ಕುರಿತು ಸಿಬಿಐ (CBI) ತನಿಖೆ ನಡೆಸುವಂತೆ ಆರ್‌ಎಲ್‌ಪಿ ನಾಯಕ ಹಾಗೂ ಜಾಟ್ ಸಮುದಾಯದ ಪ್ರಭಾವಿ ಮುಖಂಡ ಹನುಮಾನ್ ಬೆನಿವಾಲ್ ಆಗ್ರಹಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಸಾಧ್ವಿ ಜ್ವರದಿಂದ ಬಳಲುತ್ತಿದ್ದರು ಮತ್ತು ಆಶ್ರಮದಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಆಶ್ರಮಕ್ಕೆ ಕರೆಸಲಾಗಿದ್ದ ಕಾಂಪೌಂಡರ್ ನೀಡಿದ ಇಂಜೆಕ್ಷನ್ ನಂತರ ಆಕೆ ಕುಸಿದು ಬಿದ್ದಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸುದ್ದಿ ಆಶ್ರಮದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆಗೆ ಕಾರಣವಾಗಿದೆ. ಸಾವಿರಾರು ಭಕ್ತರು ಜಮಾಯಿಸಿ, ನ್ಯಾಯಯುತ ಮತ್ತು ಪಾರದರ್ಶಕ ತನಿಖೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು.

ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಒಂದು ಪೋಸ್ಟ್
ಸಾಧ್ವಿ ಮೃತಪಟ್ಟ ಕೆಲವು ಗಂಟೆಗಳ ನಂತರ ಸಾಧ್ವಿಯ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಒಂದು ಪೋಸ್ಟ್ ಕಾಣಿಸಿಕೊಂಡಿದ್ದು, ಇದು ಹೆಚ್ಚಿನ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪೊಲೀಸರ ಪ್ರಕಾರ, ಈ ಪೋಸ್ಟ್ ಒಂದು ಆತ್ಮಹತ್ಯೆಯ ಪತ್ರವಾಗಿದ್ದು, ಅದರಲ್ಲಿ ಅವರು “ಅಗ್ನಿಪರೀಕ್ಷೆ”ಯ ಬಗ್ಗೆ ಉಲ್ಲೇಖಿಸಿದ್ದಾರೆ. ತನಗೆ ಆ ಅವಕಾಶ ಸಿಗಲಿಲ್ಲ ಎಂದು ಹೇಳಿಕೊಂಡಿರುವ ಆಕೆ, ತಾನು ಮರಣ ಹೊಂದಿದ ನಂತರವಾದರೂ ನ್ಯಾಯ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ನಾನು ಪ್ರತಿ ಕ್ಷಣವನ್ನು ಸನಾತನದ ಪ್ರಚಾರಕ್ಕಾಗಿ ಜೀವಿಸಿದ್ದೇನೆ. ಈ ಜಗತ್ತಿನಲ್ಲಿ ಸನಾತನ ಧರ್ಮಕ್ಕಿಂತ ದೊಡ್ಡ ಧರ್ಮವಿಲ್ಲ. ಇಂದು ನನ್ನ ಕೊನೆಯ ಉಸಿರು ಇರುವವರೆಗೂ ನನ್ನ ಹೃದಯದಲ್ಲಿ ಇದೆ. ನಾನು ಸನಾತನ ಧರ್ಮದಲ್ಲಿ ಜನಿಸಿದ್ದು ಪುಣ್ಯ ಮತ್ತು ಸನಾತನಕ್ಕಾಗಿ ಕೊನೆಯ ಉಸಿರು ಬಿಟ್ಟಿದ್ದೇನೆ. ಆದಿ ಜಗದ್ಗುರು ಶಂಕರಾಚಾರ್ಯ, ವಿಶ್ವ ಯೋಗ ಗುರುಗಳು ಮತ್ತು ಪೂಜ್ಯ ಸಂತ ಮಹಾತ್ಮರ ಆಶೀರ್ವಾದದ ಪ್ರತಿ ಕ್ಷಣವೂ ನನ್ನ ಜೀವನದಲ್ಲಿದೆ. ನಾನು ಆದಿ ಗುರು ಶಂಕರಾಚಾರ್ಯ ಮತ್ತು ದೇಶದ ಅನೇಕ ಮಹಾನ್ ಸಂತರಿಗೆ ಪತ್ರ ಬರೆದು ಅಗ್ನಿ ಪರೀಕ್ಷೆಗೆ ಕೋರಿದ್ದೆ ಆದರೆ ಏನು ಸಿಕ್ಕಿತು? ನಾನು ಈ ಲೋಕಕ್ಕೆ ಶಾಶ್ವತ ವಿದಾಯ ಹೇಳುತ್ತಿದ್ದೇನೆ. ಆದರೆ, ನನಗೆ ದೇವರಲ್ಲಿ ಮತ್ತು ಗೌರವಾನ್ವಿತ ಸಂತ ಮಹಾತ್ಮರಲ್ಲಿ ಪೂರ್ಣ ನಂಬಿಕೆಯಿದೆ. ನಾನು ಬದುಕಿದ್ದರೂ ಅಥವಾ ನಾನು ಹೋದ ಮೇಲಾದರೂ ನ್ಯಾಯ ಸಿಗುತ್ತದೆ ‘ ಎಂದು ಪೋಸ್ಟ್‌ನಲ್ಲಿದೆ.

ಪೊಲೀಸರು ಈ ಪೋಸ್ಟ್ ಅನ್ನು ತನಿಖೆಯ ಭಾಗವಾಗಿ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಸುಮಾರು ಆರು ತಿಂಗಳ ಹಿಂದೆ, ಸಾಧ್ವಿ ಪೊಲೀಸರಿಗೆ ದೂರು ನೀಡಿದ್ದರು. ತಮ್ಮ ಸಿಬ್ಬಂದಿ ಕೆಲವರು ಡಾಕ್ಟರ್ ಮಾಡಿದ ವಿಡಿಯೋ ಬಳಸಿ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದರು. ಆ ವಿಡಿಯೋವನ್ನು ತಮ್ಮ ಮಾನಹಾನಿಗಾಗಿ ಬಳಸಲಾಗುತ್ತಿದೆ ಮತ್ತು ಅದನ್ನು ಹರಡದಂತೆ ತಡೆಯಲು 20 ಲಕ್ಷ ರೂಪಾಯಿ ಕೇಳುತ್ತಿದ್ದಾರೆ ಎಂದು ಅವರು ಹೇಳಿದ್ದರು. ನಂತರ ಆ ವಿಡಿಯೋ ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ಹರಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಜೋಗಿಂದರ್ ಅಲಿಯಾಸ್ ಜೋಗರಾಮ್ ಎಂಬಾತನನ್ನು ಬಂಧಿಸಿದ್ದರು. ಈತ ಸಾಧ್ವಿ ಪ್ರವಚನಗಳಿಗೆ ಧ್ವನಿ ವ್ಯವಸ್ಥೆ ಅಳವಡಿಸುವ ಕೆಲಸ ಮಾಡುತ್ತಿದ್ದ.ಇನ್ನು ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾಧ್ವಿ ಪ್ರೇಮ್ ಬೈಸಾ ವೈರಲ್ ವಿಡಿಯೋ!
ಕಳೆದ ವರ್ಷ, ಪ್ರೇಮ್ ಬೈಸಾ ಒಂದು ವಿವಾದದಲ್ಲಿ ಸಿಲುಕಿದ್ದರು. ಅವರ ಒಂದು ವಿಡಿಯೋ ವೈರಲ್ ಆಗಿತ್ತು, ಅದರಲ್ಲಿ ಸಾಧ್ವಿ ಅವರು ವ್ಯಕ್ತಿಯೊಬ್ಬರನ್ನು ಕೋಣೆಯೊಂದರಲ್ಲಿ ಅಪ್ಪಿಕೊಳ್ಳುತ್ತಿರುವುದು ಕಂಡುಬಂದಿತ್ತು. ಸಾಧ್ವಿ ಅವರು ಇದನ್ನು ಪ್ರೀತಿಯ ಅಭಿವ್ಯಕ್ತಿ ಎಂದು ಕರೆದಿದ್ದರು. ತಂದೆ-ಮಗಳ ಸಂಬಂಧವನ್ನು ಅವಮಾನಿಸುವ ಪ್ರಯತ್ನ ಎಂದು ಅವರು ಹೇಳಿದ್ದರು. ಪೊಲೀಸರು ಈ ಪ್ರಕರಣದ ತನಿಖೆ ನಡೆಸಿ, ವಿಡಿಯೋವನ್ನು ವೈರಲ್ ಮಾಡಿದ ಆರೋಪದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !