ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯದಲ್ಲಿ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಮಕ್ಕಳು ಐಸ್ಕ್ರೀಂ ತಿಂದ ನಂತರ ಅಸ್ವಸ್ಥರಾಗಿ ಮೃತಪಟ್ಟಿದ್ದಾರೆ ಎಂದು ಅವಳಿ ಮಕ್ಕಳ ತಾಯಿ ಆರೋಪಿಸಿದ್ದಾರೆ.
ಮಂಡ್ಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಪೂಜಾ, ಪ್ರಸನ್ನ ದಂಪತಿ ಮಕ್ಕಳಾದ ತ್ರಿಶುಲ್ ಹಾಗೂ ತ್ರಿಶಾ ಮಧ್ಯಾಹ್ನದ ವೇಳೆ ಬೀದಿ ಬದಿಯ ಐಸ್ಕ್ರೀಂ ತಿಂದಿದ್ದಾರೆ.
ಇವರ ಜೊತೆ ಅದೇ ಗ್ರಾಮದ ಉಳಿದ ಮಕ್ಕಳು ಕೂಡ ಐಸ್ಕ್ರೀಂ ತಿಂದಿದ್ದಾರೆ. ಆದರೆ ಅವರಿಗೆ ಯಾವುದೇ ಸಮಸ್ಯೆ ಆಗಿಲ್ಲ. ಮಕ್ಕಳು ಚಿಕ್ಕವರಾದ ಕಾರಣ ಐಸ್ಕ್ರೀಂ ತಿಂದು ಮೃತಪಟ್ಟಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಮಕ್ಕಳ ಮೃತದೇಹದ ಮರಣೋತ್ತರ ಪರೀಕ್ಷೆ ನಂತರ ಸಾವಿಗೆ ನಿಖರವಾದ ಕಾರಣ ತಿಳಿಯಲಿದೆ. ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.