ಹೊಸದಿಗಂತ ಮಂಗಳೂರು:
ದುಬೈಯಿಂದ ಮಂಗಳೂರಿಗೆ ಪೂರೈಕೆಯಾಗುತ್ತಿದ್ದ ಅನುಮಾನಾಸ್ಪದ ರೀತಿಯ ಸುಗಂಧ ದ್ರವ್ಯಗಳನ್ನು ಕೇರಳ ಪೊಲೀಸರು ಗುರುವಾರ ಮಂಗಳೂರಿನಲ್ಲಿ ತಪಾಸಣೆ ನಡೆಸಿದ್ದಾರೆ.
ಈ ವಸ್ತುಗಳು ಅಕ್ರಮವಾಗಿ ಸಾಗಾಟ ಮಾಡಲಾಗಿದೆ ಎನ್ನಲಾಗಿದ್ದು, ನಿಜವಾಗಿಯೂ ಬಾಕ್ಸ್ ನಲ್ಲಿ ಸಾಗಾಟ ಆದದ್ದೇನು ಎಂಬುದು ಸ್ಪಷ್ಟವಾಗಿಲ್ಲ. ಸಂಜೆ ಐದು ಗಂಟೆಯಿಂದ ತಪಾಸಣೆ ಆರಂಭವಾಗಿದ್ದರೂ ಇದು ಸ್ಥಳೀಯ ಪೊಲೀಸರ ಗಮನಕ್ಕೆ ಬಂದಿಲ್ಲ.
ಬಿಜೈ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಮೂರು ಬಾಕ್ಸ್ ಗಳಲ್ಲಿದ್ದ ಸುಗಂಧ ದ್ರವ್ಯಗಳನ್ಮು ಪರಿಶೀಲನೆ ನಡೆಸಲಾಗಿತ್ತು ದುಬೈನಿಂದ ಅಕ್ರಮವಾಗಿ ಸಾಗಿಸಲಾಗಿದೆ ಎನ್ನಲಾಗಿದ್ದು ಈ ಬಗ್ಗೆ ಪೊಲೀಸರು ಸ್ಪಷ್ಟ ಮಾಹಿತಿ ನೀಡಿಲ್ಲ.